ಬೆಂಗಳೂರು: ತೀವ್ರ ಜ್ವರ ಬಂದಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಜ್ವರದ ತೀವ್ರತೆ ಕೊಂಚ ಕಡಿಮೆಯಾಗಿದೆ.
ಸೋಮವಾರ ರಾತ್ರಿಯಿಂದಲೇ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಪುತ್ರ ಯತೀಂದ್ರ ಅವರು ನಿನ್ನೆ ಮಧ್ಯಾಹ್ನ ನಗರದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಸಿದ್ದರಾಮಯ್ಯ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದು, ಹೀಗಾಗಿ ಸದ್ಯ ಅವರ ಕಾರ್ಯಕ್ರಮಗಳು ರದ್ದಾಗಿವೆ.
ಜ್ವರ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕೂಡ ಮಾಗಿದೆ. ಅದರ ನೆಗೆಟಿವ್ ರಿಪೋರ್ಟ್ ಬಂದಿದೆ. ಸಿಟಿ ಸ್ಕ್ಯಾನಿಂಗ್ ಸಹ ರಿಪೋರ್ಟ್ ನಾರ್ಮಲ್ ಎಂದು ವರದಿ ಬಂದಿತ್ತು. ವೈರಲ್ ಫೀವರ್ ಆದ ಕಾರಣ 2 ದಿನ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ ನೀಡಿದ್ದರು. ಈ ಹಿಂದೆ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ತಗುಲಿದ್ದು, ಬಳಿಕ ಗುಣಮುಖರಾಗಿದ್ದರು.