ಯಶವಂತಪುರದಲ್ಲಿ ತಲೆ ಎತ್ತಲಿದೆ 400 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್

Public TV
1 Min Read

– ಸ್ಥಳ ಪರಿಶೀಲನೆ ನಡೆಸಿದ ಡಿಸಿಎಂ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತಪುರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುತ್ತಿರುವ 400 ಹಾಸಿಗೆಗಳ ಅತ್ಯಾಧುನಿಕ ಕೋವಿಡ್ ಕೇರ್ ಸೆಂಟರ್‍ ಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಇಂದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಮುನಿರತ್ನ ಅವರ ಜೊತೆಯಲ್ಲಿ ಕೂಲಂಕಷವಾಗಿ ಕೋವಿಡ್ ಕೇರ್ ಸೆಂಟರ್‍ ನಿರ್ಮಾಣದ ತಯಾರಿಗಳನ್ನು ವೀಕ್ಷಿಸಿದ ಅವರು ಎಲ್ಲ ಸೌಲಭ್ಯಗಳು, ಕಾಮಗಾರಿಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಇದನ್ನೂ ಓದಿ:ಬಡಜನರ ಕಷ್ಟ ಅರಿತು ದಿನಸಿ, ತರಕಾರಿ ವಿತರಿಸಿದ ಶಾಸಕ ಮುನಿರತ್ನ

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ, “ಇಲ್ಲಿ 300 ಆಕ್ಸಿಜನ್ ಹಾಗೂ 100 ಆಕ್ಸಿಜನ್ ರಹಿತ ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಸದ್ಯಕ್ಕೆ ಇದನ್ನು ಕೋವಿಡ್ ಕೇರ್ ಆಗಿ ಬಳಸಿಕೊಳ್ಳಲಾಗುತ್ತಿದೆ. ತದನಂತರ ಪೂರ್ಣ ಪ್ರಮಾಣದ ಜನರಲ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ಕ್ಷೇತ್ರದ ಜನರಿಗೆ, ಅದರಲ್ಲೂ ಯಶವಂತಪುರ ಭಾಗಕ್ಕೆ ಹೆಚ್ಚು ಅನುಕೂಲವಾಗಲಿದೆ. ಈ ಆರೈಕೆ ಕೇಂದ್ರ ಸ್ಥಾಪನೆಗಾಗಿ ಮುನಿರತ್ನ ಸಾಕಷ್ಟು ಶ್ರಮಿಸಿದ್ದಾರೆ ಎಂದರು. ಇದನ್ನೂ ಓದಿ:ಆರ್‌ಆರ್‌ ನಗರದಲ್ಲಿ 400 ಹಾಸಿಗೆಗಳ ಸುಸಜ್ಜಿತ ಕೋವಿಡ್ ಆಸ್ಪತ್ರೆ ನಿರ್ಮಾಣ: ಶಾಸಕ ಮುನಿರತ್ನ


ಈ ಆಸ್ಪತ್ರೆಯಲ್ಲಿ ಯಾವುದಕ್ಕೂ ಕೊರತೆ ಇಲ್ಲ. ಸರ್ವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಆದಷ್ಟು ಬೇಗ ಲೋಕಾರ್ಪಣೆ ಮಾಡಲಾಗುವುದು. ಮೂರನೇ ಅಲೆಯನ್ನು ಎದುರಿಸಲು ಅಗತ್ಯವಾದ ಎಲ್ಲ ಸೌಕರ್ಯಗಳು ಇಲ್ಲಿವೆ. ಸರ್ಕಾರದಿಂದ ಎಲ್ಲ ಸಹಕಾರ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *