ಸಹೋದರನ ಮಗನ ಹುಟ್ಟುಹಬ್ಬದಂದು ಹುಲಿ ದತ್ತು ಪಡೆದ ಶಾಸಕಿ ಹೆಬ್ಬಾಳ್ಕರ್

Public TV
1 Min Read

ಬೆಳಗಾವಿ: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ‘ಶೌರ್ಯ’ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.

ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿರುವ ಅವರು, ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು.

ಈ ಹುಲಿಯ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದು, ಇದರ ಜೀವಿತಾವಧಿಯವರೆಗೆ ಇದರ ಆರೈಕೆಯು ನನ್ನ ಮೇಲಿರುತ್ತದೆ. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಅತೀ ಸಂತೋಷದಿಂದ ಈ ಶೌರ್ಯ ಹುಲಿಯನ್ನು ದತ್ತು ಪಡೆದಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಇದನ್ನೂ ಓದಿ: ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

ಇದರ ಆರೈಕೆಯ ಸಲುವಾಗಿ ಪ್ರಾರಂಭದಲ್ಲಿ ಒಂದು ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ಎಡೆ ಮಾಡಿಕೊಡಬೇಕು ಎಂದು ವಿನಂತಿಸಿದರು.

Share This Article
Leave a Comment

Leave a Reply

Your email address will not be published. Required fields are marked *