ರಾಜ್ಯದ ಹವಾಮಾನ ವರದಿ 21-06-2021

Public TV
1 Min Read

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಹೆಚ್ಚಾಗುತ್ತಿದೆ. ಪೂರ್ವ ಅರಬ್ಬೀ ಸಮುದ್ರದಲ್ಲಿ ಒತ್ತಡ ಹೆಚ್ಚಳ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ 22ರ ವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಹಲವೆಡೆ ಜೂನ್ ನಿನ್ನೆಯಿಂದ ಆರಂಭವಾಗಿರೋ ಮಳೆ 22ರ ವರೆಗೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಹಾಗೂ ಅತಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್  ದಾಖಲಾಗಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 29-20
ಮಂಗಳೂರು: 28-24
ಶಿವಮೊಗ್ಗ: 28-21
ಬೆಳಗಾವಿ: 26-20
ಮೈಸೂರು: 31-21

ಮಂಡ್ಯ: 32-21
ರಾಮನಗರ: 31-24
ಮಡಿಕೇರಿ: 22-17
ಹಾಸನ: 26-19
ಚಾಮರಾಜನಗರ: 31-21

ಚಿಕ್ಕಬಳ್ಳಾಪುರ: 29-19
ಕೋಲಾರ: 32-21
ತುಮಕೂರು: 30-21
ಉಡುಪಿ: 28-24
ಕಾರವಾರ: 28-25

ಚಿಕ್ಕಮಗಳೂರು: 25-18
ದಾವಣಗೆರೆ: 28-21
ಚಿತ್ರದುರ್ಗ: 29-21
ಹಾವೇರಿ: 28-22


ಗದಗ: 29-21
ಕೊಪ್ಪಳ: 30-22
ರಾಯಚೂರು: 34-24
ಯಾದಗಿರಿ: 34-24

ವಿಜಯಪುರ: 30-20
ಬೀದರ್: 33-22
ಕಲಬುರಗಿ: 33-23
ಬಾಗಲಕೋಟೆ: 32-22

Share This Article
Leave a Comment

Leave a Reply

Your email address will not be published. Required fields are marked *