ಪುಕ್ಕಟೆ ಕೊತ್ತಂಬರಿ ಸೊಪ್ಪಿಗಾಗಿ ಮುಗಿ ಬಿದ್ದ ಜನ

Public TV
0 Min Read

ತುಮಕೂರು: ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ.

ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ.

ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *