ರೈಲಿಗೆ ಸಿಲುಕಿ ಇಬ್ಬರು ದುರ್ಮರಣ

Public TV
1 Min Read

ಚಿತ್ರದುರ್ಗ: ಚಲಿಸುವ ರೈಲಿಗೆ ಸಿಲುಕಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದ ಬಳಿ ನಡೆದಿದೆ.

ದೇವರಾಜ(43), ಸುನೀಲ್(28) ಮೃತರಾಗಿದ್ದಾರೆ. ಬೇಡರೆಡ್ಡಿಹಳ್ಳಿ ಬಳಿಯ ರೈಲ್ವೆ ಗೇಟ್ ದಾಟುವ ವೇಳೆ ದುರ್ಘಟನೆ ಸಂಭವಿಸಿರುವ ಸಾಧ್ಯತೆ ಇದ್ದು, ರಾತ್ರಿ ವೇಳೆ ಚಳ್ಳಕೆರೆಯಿಂದ ತಳಕು ಗ್ರಾಮದ ಬೋವಿ ಕಾಲೋನಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ:  ಹೆಂಡತಿಯಾಗಿದ್ದವಳು ಮಲತಾಯಿಯಾಗಿ ಬಂದಳು..!

ದೇಹಗಳು ರೈಲಿಗೆ ಸಿಲುಕಿರುವ ಹಿನ್ನೆಲೆಯಲ್ಲಿ ಕೈಕಾಲುಗಳು ತುಂಡು ತುಂಡಾಗಿ ಆಗಿದೆ. ದೇಹದ ಭಾಗಗಳು ದಿಕ್ಕಿಗೊಂದು ಬಿದ್ದಿರುವ ದೃಶ್ಯ ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಇದನ್ನೂ ಓದಿ:  ಶಕ್ತಿ ಇದ್ದರೆ ಅಪ್ಪ, ಮಗ ಅಂಬಾರಿ ಹೊರುತ್ತಾರೆ: ಬಿ.ಸಿ.ಪಾಟೀಲ್

ಈ ಪ್ರಕರಣ ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ರೈಲ್ವೆ ಪೊಲೀಸರು ಹಾಗೂ ತಳಕು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *