ದರ್ಶನ್ ವಿಚಲಿತರಾಗಿದ್ದಾರೆ, ಮೊದಲು ನನ್ನ ಪ್ರಶ್ನೆಗಳಿಗೆ ಉತ್ತರ ಕೊಡಲಿ: ಇಂದ್ರಜಿತ್

Public TV
3 Min Read

– ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ

ಬೆಂಗಳೂರು: ನಟ ದರ್ಶನ್ ಮಾತನಾಡಿದ್ದನ್ನು ನೋಡಿದ್ದೇನೆ. ಅವರು ತುಂಬಾ ವಿಚಲಿತರಾಗಿದ್ದಾರೆ. ಮೊದಲು ನನ್ನ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲಿನಲ್ಲಿ ನೀವು ಬಡವ ಸಪ್ಲೇಯರ್ ಗೆ ಹೊಡೆದ್ರೋ ಇಲ್ಲವೋ..?, ಅಂದು ನೀವು ಯಾರ ಜೊತೆಗಿದ್ರಿ..?, 25 ಕೋಟಿ ಡೀಲ್ ವಿಚಾರ ಸಂಬಂಧ ನೀವು ಅರುಣಾ ದೇವಿಯನ್ನು ಯಾಕೆ ತೋಟಕ್ಕೆ ಕರೆದ್ರಿ..?. ಮೊದಲು ನನ್ನ ಈ ಪ್ರಶ್ನೆಗಳಿಗೆ ಉತ್ತರ ನೀಡಿ. ಅಲ್ಲದೆ ಬಡವನಿಗೆ ಹೊಡೆದಿಲ್ಲ ಅಂದ್ರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡಿ ಎಂದು ಚಾಲೆಂಜ್ ಹಾಕಿದ್ರು.

ದರ್ಶನ್ ವಿಚಲಿತರಾಗಿದ್ದಾರೆ. ಅವರು ಈ ಸಂದರ್ಭದಲ್ಲಿ ವಿಚಲಿತರಾಗಬೇಕಾಗಿಲ್ಲ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಟ್ಟರೆ ಸಾಕು. ಅವರು ಇಂದು ಬಳಸಿರುವ ಭಾಷೆ ಅವರ ಹಿನ್ನೆಲೆ ತೋರಿಸುತ್ತದೆ. ನಾನು ಅವರನ್ನು ಅನ್ ಎಜುಕೇಟೆಡ್ ಅಂತ ಹೇಳಿಲ್ಲ. ರಾಜ್ ಕುಮಾರ್ ನಡೆದು ಬಂದ ದಾರಿ, ಭಾಷೆ, ಸಿನಿಮಾ, ನಟನೆಯ ಬಗ್ಗೆ ಇರುವ ಕಾಳಜಿ ಇಡೀ ದೇಶಕ್ಕೆ ಗೊತ್ತಿದೆ ಎಂದರು. ಇದನ್ನೂ ಓದಿ: ನನ್ನ ಬಳಿಯಲ್ಲಿದ್ದ ಆಸ್ತಿ ದರ್ಶನ್ ಕೇಳಿದ್ದು ನಿಜ, ಕೊಡಲ್ಲ ಅಂದಿದ್ದೆ: ನಿರ್ಮಾಪಕ ಉಮಾಪತಿ

ಡಿಸ್ಟರ್ಬ್ ಆಗಿದ್ರೆ ಟ್ರೀಟ್ಮೆಂಟ್ ತಗೋಳಿ ದರ್ಶನ್ ಅವರೇ. ಆಡಿಯೋ, ವೀಡಿಯೋ ಸಾಕ್ಷ್ಯಗಳನ್ನು ಪೊಲೀಸರ ಮುಂದೆ ತೋರಿಸುತ್ತೇವೆ. ಇವರ ಮುಂದಿಡುವ ಅವಶ್ಯಕತೆ ಇಲ್ಲ. ಮಹಿಳೆಗೆ ಬೆದರಿಕೆ ಹಾಗೂ ಸಪ್ಲೇಯರ್ ಗೆ ಹೊಡೆದಿದ್ದಾರೆ. ಇದರ ಬಗ್ಗೆ ತನಿಖೆ ಆಗಬೇಕು ಎಂದಾಗ ಇಷ್ಟೊಂದು ವಿಚಾರಗಳು ಹೊರ ಬಂದಿದೆ. ಇನ್ನೂ ಕೂಡ ಎಷ್ಟೊಂದು ವಿಚಾರಗಳು ಹೊರ ಬರುತ್ತವೆ ಎಂದು ದರ್ಶನ್ ಈಗಾಗಲೇ ವಿಚಲಿತರಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.

ಗಂಡಸಾಗಿರುವುದನ್ನು ಪ್ರೂವ್ ಮಾಡೋಕೆ ಹೇಳಿದ್ದಾರೆ. ಅವರ ಈ ಮಾತಿನಿಂದ ನನಗೆ ನಗು ಬರುತ್ತೆ. ಬಡವ ಸಪ್ಲೆಯರ್‍ಗೆ ಹೊಡೆದಿದ್ದೀರಾ ಎಂಬುದಕ್ಕೆ ಉತ್ತರ ಕೊಡಿ. ಅವರಿಗೆ ಹೊಡೆಯುವುದು ಎಷ್ಟು ಸರಿ..? ಅರುಣಾ ದೇವಿಯರನ್ನು ಮನೆಗೆ ಕರೆಸಿಕೊಂಡ್ರೋ..? ಇಲ್ಲವೋ..? ಹೇಳಿ. 25 ಕೋಟಿ ಡೀಲ್ ಹಿನ್ನೆಲೆ ಬಗ್ಗೆ ಹೇಳಿ ಎಂದು ಇಂದ್ರಜಿತ್ ಒತ್ತಾಯಿಸಿದರು. ಇದನ್ನೂ ಓದಿ: ಇಂದೇ ಸ್ಟಿಂಗ್ ಆಪರೇಷನ್ ಮಾಡಿದರೂ ನಾನು ಹೆದರಲ್ಲ: ದರ್ಶನ್

ಧರ್ಮಪತ್ನಿ ವಿಚಾರದಲ್ಲಿ ಯಾಕೆ ಲಾಯರ್ ಕರೆಸಿಕೊಂಡ್ರಿ ಅನ್ನೋದು ಇಡೀ ಕರ್ನಾಟಕಕ್ಕೆ ಗೊತ್ತು. ಇದೆಲ್ಲ ಹೀರೋಯಿಸಂ, ಇದನ್ನು ಸಿನಿಮಾದಲ್ಲಿ ಇಟ್ಟುಕೊಳ್ಳಿ. ನನಗೆ ಸಂಸ್ಕಾರ, ಸಂಸ್ಕೃತಿ ಇದೆ. ಗಾಂಡುಗಿರಿ ಅಲ್ಲ ಗೂಂಡಾಗಿರಿ ಅಂದಿದ್ದು, ಮೊದಲು ಕನ್ನಡ ಸರಿಯಾಗಿ ಓದಲು ಹೇಳಿ. ಅನ್ ಎಜುಕೇಟೆಡ್ ಅಂತ ಎಲ್ಲಿ ಹೇಳಿದ್ದೀನಿ..? ಸೆಲೆಬ್ರಿಟಿ ಮೊದಲು ಮಾದರಿಯಾಗಲಿ. ಈ ರೀತಿ ಮಾಡುವುದಲ್ಲ. ಅಲ್ಲದೆ ತಲೆ ಸೀಳ್ತೀನಿ ಅನ್ನೋದು ಸರಿಯಲ್ಲ ಅನ್ನೋ ಅರ್ಥ ಬರುವಂತೆ ಹೇಳಿದ್ದೇನೆ ಎಂದರು.

ತನಿಖಾ ತಂಡದ ಮುಂದೆ ಎಲ್ಲಾ ಸಾಕ್ಷ್ಯಗಳನ್ನು ಒದಗಿಸುತ್ತೇನೆ. ಡ್ರಗ್ಸ್ ಕೇಸ್ ವಿಚಾರದಲ್ಲಿ ನಿಮಗೆ ಏನಾದರೂ ತೊಂದರೆ ಆಗಿದೆಯಾ..? ಯಾಕೆ ಈ ವಿಚಾರ ಇಂದು ಮಾತನಾಡಿದ್ದೀರಿ. ಡ್ರಗ್ಸ್ ಕೇಸ್ ನಲ್ಲಿ ದೊಡ್ಡ ದೊಡ್ಡ ಕುಳಗಳು ಹೊರಬಂದವು. ಹೋಟೇಲಿನ ಸಿಬ್ಬಂದಿ, ಸೆಕ್ಯೂರಿಟಿ ಗಾರ್ಡ್ ಹೀಗೆ ಎಲ್ಲರೂ ಮಾತನಾಡಿದ್ದಾರೆ. ಯಾಕೆ ಪೊಲೀಸರು ಇನ್ನೂ ಸುಮೊಟೋ ಕೇಸ್ ದಾಖಲಿಸಿಲ್ಲ. ಯಾಕೆ ಬಡವರಿಗೆ ಅನ್ಯಾಯ ಆಗುತ್ತಿದೆ ಎಂದು ಇಂದ್ರಜಿತ್ ಪ್ರಶ್ನಿಸಿದರು. ಇದನ್ನೂ ಓದಿ: ಇಂದ್ರಜಿತ್ ಅಪ್ಪನಿಗೆ ಹುಟ್ಟಿದವರಾಗಿದ್ರೆ ದಾಖಲೆ ರಿಲೀಸ್ ಮಾಡಲಿ: ದರ್ಶನ್ ನೇರ ಸವಾಲ್

ಸಿನಿಮಾ ಹಿನ್ನೆಲೆ ಏನೂ ಇಲ್ಲ ಎಂದು ದರ್ಶನ್ ಹೇಳಿರುವುದನ್ನು ಮಾಧ್ಯಮದವರು ಪ್ರಸ್ತಾಪಿಸಿದಾಗ, ಯುವ ಪ್ರತಿಭೆಗಳಿಗೆ ಸಿನಿಮಾ ಮಾಡಿದ್ದೇನೆ, ಯುವಕ, ಯುವಕರಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ಅನೇಕ ರಾಷ್ಟ್ರ, ರಾಜ್ಯ ಪ್ರಶಸ್ತಿಗಳು ನನಗೆ ಬಂದಿವೆ. ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕರು ಸಾಮಾನ್ಯ ಜನರ ಹಣ ತೆಗೆದುಕೊಂಡು ಹೋಗಿದ್ದಕ್ಕೆ ಇಂದು ಜೈಲಿಗೆ ಹೋಗಿದ್ದಾರೆ. ಇದರ ಬಗ್ಗೆ ಈವಾಗ ಮಾತನಾಡುವುದು ಬೇಡ. ಇಲ್ಲಿ ಸಿನಿಮಾದ ವಿಚಾರವಲ್ಲ ಎಂದರು.

ನಾನೊಬ್ಬ ಪತ್ರಕರ್ತ, ನನಗೆ ಜವಾಬ್ದಾರಿ ಇದೆ. ಹೀಗಾಗಿ ಇಲ್ಲಿ ನಾನು ಜಾಸ್ತಿ ಮಾತಾಡಲ್ಲ. ಎಲ್ಲವನ್ನೂ ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ನಾನು ರೆಡಿಯಾಗಿದ್ದೇನೆ ಎಂದು ಇಂದ್ರಜಿತ್ ಹೇಳಿದರು.  ಇದನ್ನೂ ಓದಿ: ಯಾವುದೇ ಕಾರಣಕ್ಕೂ ನಮಗೂ, ದೊಡ್ಮನೆಗೂ ಹೋಲಿಕೆ ಮಾಡ್ಬೇಡಿ: ಚಾಲೆಂಜಿಂಗ್ ಸ್ಟಾರ್ ಎಚ್ಚರಿಕೆ

Share This Article
Leave a Comment

Leave a Reply

Your email address will not be published. Required fields are marked *