ಬಕ್ರೀದ್- ಜಾನುವಾರು ಅಕ್ರಮ ಸಾಗಣಿಕೆ ತಡೆಗೆ ಚೆಕ್ ಪೋಸ್ಟ್

Public TV
1 Min Read

ಯಾದಗಿರಿ: ಬಕ್ರೀದ್ ಹಬ್ಬದ ಹಿನ್ನಲೆ ಜಾನುವಾರು ಅಕ್ರಮ ಸಾಗಣೆಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾಡಳಿತ ಸಭಾಂಗಣದ ಕಚೇರಿಯಲ್ಲಿ ಶನಿವಾರ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಬಕ್ರೀದ್ ಹಬ್ಬ ಸಂದರ್ಭದಲ್ಲಿ ಮಸೀದಿಗಳಲ್ಲಿ 50 ಜನ ಸೇರುವ ಬದಲು, ಆಯಾ ಮಸೀದಿ ಸಾಮರ್ಥ್ಯದ ಶೇ.50ರಷ್ಟು ಮಂದಿಗೆ ಸಾಮೂಹಿಕ ಪ್ರಾರ್ಥನೆ ಮಾಡಲು ಅವಕಾಶ ನೀಡಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪರಿಷ್ಕೃತ ಅದೇಶ ಹೊರಡಿಸಿದೆ. ಅದೇ ರೀತಿ ಪರಸ್ಪರ 6 ಆಡಿ ಅಂತರ, ಮಾಸ್ಕ್ ಕಡ್ಡಾಯ ಮತ್ತಿತರ ಅಂಶಗಳನ್ನು ಪಾಲಿಸಬೇಕು. ಹಸ್ತಲಾಘವ, ಪರಸ್ಪರ ಆಲಿಂಗನ ಮತ್ತಿತರ ಪ್ರಕ್ರಿಯೆಗಳನ್ನು ನಿರ್ಬಂಧಿಸಬೇಕು ಎಂದು ಹೇಳಿದರು.

ಬಳಿಕ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಮಾತನಾಡಿ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರನ್ವಯ ಯಾವುದೇ ರೀತಿಯ ಜಾನುವಾರುಗಳ ಹತ್ಯೆ ಮಾಡುವಂತಿಲ್ಲ ಎಂದು ಹೇಳಿದರು. ಜಾನುವಾರು ಅಕ್ರಮ ಸಾಗಣಿಕೆ ಕಾನೂನು ಬಾಹಿರವಾಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ವತಿಯಿಂದ ಚೆಕ್ ಪೋಸ್ಟ್ ಸ್ಥಾಪಿಸಲಾಗುವುದು ಎಂದರು.

Share This Article
Leave a Comment

Leave a Reply

Your email address will not be published. Required fields are marked *