ಸೋಮವಾರಪೇಟೆ-ಸುಂಟಿಕೊಪ್ಪ ಮಾರ್ಗ ತಾತ್ಕಾಲಿಕ ಸ್ಥಗಿತ!

Public TV
1 Min Read

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಎಡೆಬಿಡದೆ ಸುರಿಯುತ್ತದೆ. ಪರಿಣಾಮ ರಾಜ್ಯ ಹೆದ್ದಾರಿಯಲ್ಲಿ ಅಂತರ್ಜಲದಮಟ್ಟ ಹೆಚ್ಚಾಗಿ ರಸ್ತೆಮಧ್ಯ ಭಾಗ ಗುಂಡಿ ಬಿದ್ದಿದ್ದು, ಕುಸಿಯುವ ಹಂತಕ್ಕೆ ತಲುಪಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ – ಮಾದಾಪುರ ರಸ್ತೆಯ ಸ್ವಸ್ಥ ಶಾಲೆ ಸಮೀಪ ಭೂಕುಸಿತವಾಗಿರುವ ರಸ್ತೆಯ ನಡುವೆ ಜಲ ಉಕ್ಕುತ್ತಿದು ರಸ್ತೆ ಮದ್ಯ ಭಾಗವೇ ಸಂಪೂರ್ಣ ಕುಸಿಯುವ ಹಂತಕ್ಕೆ ತಲುಪಿದೆ. ಹೀಗಾಗಿ ಸುಂಟಿಕೊಪ್ಪ ಸೋಮವಾರಪೇಟೆಗೆ ಹೋಗುವ ಜನಸಾಮಾನ್ಯರಿಗೆ ನಾಲ್ಕು ಐದು ಕಿಲೋ ಮೀಟರ್ ಸುತ್ತಿಬಳಸಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆಗಸ್ಟ್ ತಿಂಗಳ ಮೊದಲ ರಾತ್ರಿ ಸುರಿದ ಮಳೆಗೆ ಈ ರೀತಿಯಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಅತಂಕಕ್ಕೆ ಒಳಗಾಗಿದ್ದಾರೆ. ರಸ್ತೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಅಂತರ್ಜಲದ ಮಟ್ಟ ಎಲ್ಲಿ ಇದೆ ಎಂದು ಪರಿಶೀಲನೆ ನಡೆಸಿ ಪ್ರಾಥಮಿಕ ವರದಿ ನೋಡಿಕೊಂಡು ಅದಷ್ಟು ಬೇಗ ರಸ್ತೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸನ್ನಿಲಿಯೋನ್ ಮನೆಯಲ್ಲಿ ಜಿರಳೆ ಕಾಟ- ದಂಪತಿಯನ್ನು ಕಂಡು ನಕ್ಕ ನೆಟ್ಟಿಗರು

ಸದ್ಯದ ಮಟ್ಟಿಗೆ ಈ ಭಾಗದ ಜನರು ವಾಹನಗಳನ್ನು ಕಾನ್ ಬೈಲ್ – ನಾಕೂರು ಶಿರಂಗಾಲ – ಗುಂಡುಗುಟ್ಟಿ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಸ್ಥಳದಲ್ಲಿ ಸಂಬಂಧಿಸಿದ ಇಲಾಖೆಯ ಎಂಜಿನಿಯರ್ ಗಳು, ಪಿಡಿಓ ವೇಣುಗೋಪಾಲ್ ಮತ್ತು ಪಂಚಾಯ್ತಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪರವರು ಮೊಕ್ಕಾಂ ಹೂಡಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ನಿರತರಾಗಿದ್ದಾರೆ.

ತಾಯಿ-ಮಗಳು ಪ್ರಾಣಾಪಾಯದಿಂದ ಪಾರು:
ಕೊಡಗು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಸೋಮವಾರಪೇಟೆ ತಾಲೂಕಿನ ಕಾಂಡನಕೊಳ್ಳಿ ಹಾಲೇರಿ ಗ್ರಾಮದ ಕದಂಡಾಲು ಎಂಬಲ್ಲಿ ಒಡ್ಡಚೆಟ್ಟಿರ ಚೊನ್ದಕ್ಕಿ ಎಂಬುವವರ ಮನೆ ಸಂಪೂರ್ಣ ಕುಸಿದು ಹಾನಿಯುಂಟಾಗಿದೆ. ಮನೆಯಲ್ಲಿ ಒಡ್ಡಚೆಟ್ಟಿರ ಚೊನ್ದಕ್ಕಿ ತನ್ನ ಮಗಳೊಂದಿಗೆ ವಾಸವಿದ್ದು, ಮಳೆಯ ತೀವ್ರತೆಗೆ ಹೆದರಿ, ದಿನದ ಮುಂದೆಯೆ ಮುಕ್ಕೋಡ್ಲುವಿನ ತಮ್ಮ ಬಂದುಗಳ ಮನೆಗೆ ತೆರಳಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *