ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ: ಎಎಪಿ

Public TV
2 Min Read

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಬಿಜೆಪಿ ಸರ್ಕಾರದಲ್ಲಿ ಬಿಜೆಪಿ ಶಾಸಕರಿಗೇ ರಕ್ಷಣೆ ಇಲ್ಲ, ಇನ್ನು ಜನಸಾಮಾನ್ಯನಿಗೆ ಎಲ್ಲಿಯ ರಕ್ಷಣೆ? ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸಲು ಸಾಧ್ಯವೇ ಎಂದು ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಪ್ರಶ್ನಿಸಿದರು.

ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಕಚೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡ ಅವರು, “ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ವ್ಯಾಪಕವಾಗಿ ಏರಿಕೆಯಾಗುತ್ತಿವೆ. ಮಕ್ಕಳು ಮಹಿಳೆಯರು ಮಾತ್ರವಲ್ಲದೇ ಸಣ್ಣಪುಟ್ಟ ಜನಪ್ರತಿನಿಧಿಗಳು ಕೂಡ ಹೆದರಿಕೆಯಿಂದ ತಿರುಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಇಂದು ಮುಖ್ಯಮಂತ್ರಿ ಆಗಿರುವ ಬೊಮ್ಮಾಯಿ ಅವರು ಗೃಹ ಸಚಿವ ಆಗಿದ್ದಾಗ ಅಪರಾಧ ಪ್ರಕರಣಗಳು ಶೇ.20ರಷ್ಟು ಹೆಚ್ಚಾಗಿದೆ ಎಂದು ಬೊಮ್ಮಾಯಿಯವರೇ ಒಪ್ಪಿಕೊಂಡಿದ್ದರು. ಆದರೂ ಅಪರಾಧಗಳಿಗೆ ಕಡಿವಾಣ ಹಾಕಲು ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆ ನಡೆಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನೇಕ ಠಾಣೆಗಳಲ್ಲಿ  ಪೊಲೀಸರು ಎಫ್‍ಐಆರ್ ದಾಖಲಿಸಲು ನಿರಾಕರಿಸುತ್ತಿದ್ದಾರೆ” ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರಲ್ಲಿ ವೀಕೆಂಡ್ ಕರ್ಫ್ಯೂ ಇಲ್ಲ – ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ, ಕಾಲೇಜು ಆರಂಭ

ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಕಾನೂನಿನ ಮೇಲೆ ಭಯ ಇಲ್ಲದ ಹಾಗೆ ಆಗಿದೆ. ಶಾಸಕ ಅಖಂಡ ಶ್ರೀನಿವಾಸ್ ಮನೆ ಧ್ವಂಸ, ಪೊಲೀಸ್ ಮೇಲೆ ಹಲ್ಲೆ ನಡೆಯಿತು. ಬಿಜೆಪಿ ಕರ್ಪೊರೇಟರ್ ರೇಖಾ ಖದಿರೇಶ್ ಹತ್ಯೆ ನಡೆಯಿತು. ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಪ್ರಾಣ ಹಾನಿಯಾನಿಯಾಗದೆ ಅನಾಹುತ ತಪ್ಪಿದೆ. ತಮ್ಮ ಶಾಸಕರಿಗೆ ರಕ್ಷಣೆ ಕೊಡಲಾಗದ ಬಿಜೆಪಿ ಸರ್ಕಾರ ಯಾವ ಮಟ್ಟದಲ್ಲಿ ಜನಸಾಮಾನ್ಯನಿಗೆ ರಕ್ಷಣೆ ಕೊಡಲು ಸಾಧ್ಯ? ಇಷ್ಟೆಲ್ಲಾ ಅಪರಾಧಗಳು ನಡೆಯುವಾಗ ಪೊಲೀಸ್ ಇಲಾಖೆ ಯಾವ ಮಟ್ಟಿನ ಭಯವನ್ನು ಕ್ರಿಮಿನಲ್ ಗಳಲ್ಲಿ ಪೊಲೀಸ್ ಇಲಾಖೆ ಇಟ್ಟಿದೆ? ಎಂದು ಪ್ರಶ್ನೆ ಮಾಡಿದರು.

ಬೆಂಗಳೂರಿನಲ್ಲಿ ಅಲ್ಲಲ್ಲಿ ಲೆಕ್ಕವಿಲ್ಲದಷ್ಟು ಚೈನ್ ಹಾಗೂ ಮೊಬೈಲ್ ಕಳ್ಳತನ ನಡೆಯುತ್ತಿದೆ. ಪೊಲೀಸರು ಈ ಪ್ರಕರಣಗಳನ್ನು ಎಫ್‍ಐಆರ್ ಮಾಡುತ್ತಿಲ್ಲ. ಪೊಲೀಸ್ ಇಲಾಖೆ ಇಂದು ರಸ್ತೆಗಳಲ್ಲಿ ನಿಂತುಕೊಂಡು ವಾಹನ ಸವಾರರನ್ನು ನಿಲ್ಲಿಸಿ ದಂಡ ಹಾಕಿ ಹಣ ವಸೂಲಿ ಮಾಡುವ ಕೆಲಸದಲ್ಲಿ ನಿರತರಾಗಿದ್ದು ಕಳ್ಳತನ, ಕೊಲೆ ಮೊದಲಾದ ಅಪರಾಧಗಳನ್ನು ತಡೆಯುವ ಕೆಲಸವನ್ನು ಮಾಡುತ್ತಿಲ್ಲ. ಇಲಾಖೆ ಇದ್ದು ಏನು ಪ್ರಯೋಜನ ಎಂದರು.

ಪತ್ರಿಕಾಗೋಷ್ಠಿಯ ಉಪಸ್ಥಿತರಿದ್ದ ಫಿರೋಜ್ ಅವರು ಮಾತನಾಡಿ, ರಾಜ್ಯದಲ್ಲಿ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿದೆ. ಫೇಸ್ ಬುಕ್‍ನಲ್ಲಿ ನಕಲಿ ಖಾತೆ ತೆರೆದು, ಅವರ ಸ್ನೇಹಿತರಿಗೆಲ್ಲ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ಕೇಳುವ ದೊಡ್ಡ ಜಾಲವಿದೆ. ಸುರೇಶ್ ಕುಮಾರ್ ಸೇರಿದಂತೆ ರಾಜ್ಯದ ಲಕ್ಷಕ್ಕೂ ಅಧಿಕ ಸಾಮಾಜಿಕ ತಾಣ ಬಳಕೆದಾರರು ಇದರಿಂದ ತೊಂದರೆ ಅನುಭವಿಸಿದ್ದಾರೆ. ಆದರೆ ಪೊಲೀಸರು ಮಾತ್ರ ಇಂತಹ ಯಾವುದೇ ಪ್ರಕರಣವನ್ನು ಬೇಧಿಸಿಲ್ಲ. ದಕ್ಷತೆಗೆ ಹೆಸರಾಗಿರುವ ಕರ್ನಾಟಕ ಪೊಲೀಸ್ ಇಲಾಖೆ ಇಂದು ಕೈಕಟ್ಟಿ ಕುಳಿತಿದೆ. ಹೀಗೆ ಮುಂದುವರಿದಲ್ಲಿ ಕರ್ನಾಟಕ ಕೂಡ ಇನ್ನೊಂದು ಉತ್ತರ ಪ್ರದೇಶ ಆಗುವುದರಲ್ಲಿ ಅಚ್ಚರಿ ಇಲ್ಲ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *