ಗಣೇಶ ಹಬ್ಬಕ್ಕೆ ಶುಭಕೋರಿದ ಪ್ರಧಾನಿ, ರಾಷ್ಟ್ರಪತಿ

Public TV
1 Min Read

ನವದೆಹಲಿ: ದೇಶಾದ್ಯಂತ ಸಂಭ್ರಮದಿಂದ ಆಚರಿಸುತ್ತಿರುವ ಗಣೇಶ ಹಬ್ಬಕ್ಕೆ ಟ್ವಿಟ್ಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಾಶಯ ಕೋರಿದ್ದಾರೆ.

ನಿಮ್ಮೆಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯಗಳು. ಗಣೇಶ ಹಬ್ಬದ ಮೂಲಕ ಪ್ರತಿಯೊಬ್ಬರ ಜೀವನಕ್ಕೂ ಸುಖ, ಶಾಂತಿ, ಸಂತೋಷ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಗಣಪತಿ ಬಪ್ಪ ಮೋರಿಯಾ ಎಂದು ಮೋದಿ ದೇಶದ ಜನತೆಗೆ ಶುಭಕೋರಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಸಿಎಂ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೂಡ ದೇಶದ ಜನತೆ ಟ್ಟಿಟ್ಟರ್ ಮೂಲಕ ಶುಭಾಶಯ ತಿಳಿದ್ದು, ಗಣಪತಿ ಬಪ್ಪ ಮೋರಿಯಾ. ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳು. ಕೋವಿಡ್-19 ವಿರುದ್ಧ ವಿಘ್ನನಿವಾರಕ ಗಣೇಶ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸಲಿ ಮತ್ತು ಎಲ್ಲರನ್ನೂ ಸಂತೋಷ ಮತ್ತು ಶಾಂತಿಯಿಂದ ಆಶೀರ್ವದಿಸಲಿ ಎಂದು ಹಾರೈಸುತ್ತೇನೆ. ನಾವೆಲ್ಲರೂ ಈ ಹಬ್ಬವನ್ನು ಕೋವಿಡ್ ಸ್ನೇಹಿಯಾಗಿ ಆಚರಿಸೋಣ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ವಾಯುಸೇನೆ ವಿಮಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್

Share This Article
Leave a Comment

Leave a Reply

Your email address will not be published. Required fields are marked *