ಅನಾರೋಗ್ಯ ಪೀಡಿತರ ಸಹಾಯಕ್ಕೆ ವೇಷ ಧರಿಸಿ ಮಾನವೀಯತೆಯ ಮೆರೆದ ಯುವಕ

Public TV
1 Min Read

ಮಂಗಳೂರು: ಅನಾರೋಗ್ಯ ಪೀಡಿತರ ಸಹಾಯಕ್ಕಾಗಿ ನಗರದ ಹೊರವಲಯದ ಸುರತ್ಕಲ್ ಸಮೀಪದ ಜನತಾ ಕಾಲೋನಿಯ ನಿವಾಸಿ ಧನಂಜಯ(ಧನು) ಪೂಜಾರಿಯವರು ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿ ಹಣ ಸಂಗ್ರಹಿಸಿದ್ದಾರೆ.

ನಗರದ ಹೊರವಲಯದ ಸುರತ್ಕಲ್ ಸಮೀಪದ ಜನತಾ ಕಾಲೋನಿಯ ನಿವಾಸಿ ಧನಂಜಯ(ಧನು) ಪೂಜಾರಿಯವರು ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿ ತನ್ನ ಬಂಧು-ಬಳಗ, ಗೆಳೆಯರ ಹಾಗೂ ಸಾರ್ವಜನಿಕರ ಸಹಕಾರದಿಂದ 26,994 ರೂಪಾಯಿ ಸಂಗ್ರಹಿಸಿದ್ದಾರೆ. ಈ ಹಣವನ್ನು 3 ಜನ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ನೀಡಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ವೇಷಧರಿಸಿ 72 ಲಕ್ಷ ರೂ. ದಾನ ಮಾಡಿದ್ದ ರವಿ ಕಟಪಾಡಿ ಈ ಬಾರಿ ಡಾರ್ಕ್ ಅಲೈಟ್ ಲುಕ್‍ನಲ್ಲಿ ಪ್ರತ್ಯಕ್ಷ

ಇವರು ಕಲೆಗಾರರಾಗಿದ್ದು, ಸುರತ್ಕಲ್ ಆಪತ್ಬಾಂಧವ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದಾರೆ. ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತ ಇನ್ನೊಬ್ಬರ ನೋವಿಗೆ ಸ್ಪಂದಿಸುವ ಹೃದಯವಂತಿಕೆಯವರು. ಇವರ ಹೃದಯವಂತಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಗುಂಬೆ ಘಾಟ್ ತಿರುವಿನಲ್ಲಿ ಧರೆಗುರುಳಿದ ಮರ – ಎರಡು ಗಂಟೆ ರಸ್ತೆ ಬ್ಲಾಕ್

Share This Article
Leave a Comment

Leave a Reply

Your email address will not be published. Required fields are marked *