ರೌಡಿಗಳಿಗೆ ಕಾನೂನಿನ ಭಯವಿಲ್ಲದೆ ಅಟ್ಟಹಾಸ ತೋರಿಸುತ್ತಿದ್ದಾರೆ: ಯು.ಟಿ.ಖಾದರ್

Public TV
1 Min Read

ಮಂಗಳೂರು: ಸುರತ್ಕಲ್‍ನಲ್ಲಿ ನೈತಿಕ ಪೊಲೀಸ್ ಗಿರಿ ಮಾಡುವ ಮೂಲಕ ರೌಡಿಗಳಿಗೆ ಕಾನೂನಿನ ಭಯವಿಲ್ಲದೇ ಅಟ್ಟಹಾಸ ತೋರಿಸುತ್ತಿದ್ದಾರೆ. ಆಡಳಿತ ಪಕ್ಷದ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಾಹಕವಾಗಿದೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಸಮಾಜದ್ರೋಹಿ ಶಕ್ತಿಗಳು, ರೌಡಿಗಳ ಅಟ್ಟಹಾಸ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಪೊಲೀಸರು ರಾಜಕೀಯ ಬಾಸ್‍ಗಳ ಮಾತುಗಳಿಗೆ ಗೌರವ ಕೊಡಬಾರದು, ಕಾನೂನುಗಳಿಗೆ ಗೌರವ ಕೊಡಬೇಕು. ಯಾರ್ಯಾರ ಮಕ್ಕಳಿಗೆ ಸಂಬಂದ ಇಲ್ಲದವರು ಹೊಡೆಯುತ್ತಿದ್ದಾರೆ. ಈ ರೀತಿ ಆದರೆ ಅರಾಜಕತೆ ಸೃಷ್ಟಿಯಾಗುತ್ತದೆ. ಪೊಲೀಸ್ ಇಲಾಖೆಯ ಮುಂದೆಯೇ ಹೊಡಿಯುತ್ತಾರೆ. ಪೊಲೀಸರು ಹೊಡಿಬೇಡಿ ಎಂದು ಅಂಗಲಾಚುವ ವೀಡಿಯೋ ವೈರಲ್ ಆಗುತ್ತಿದೆ. ಪೊಲೀಸ್ ಇಲಾಖೆಯ ಲಾಠಿ ಎಲ್ಲಿ ಹೋಯಿತು, ಪೊಲೀಸರು ಲಾಠಿ ಬಿಟ್ರೆ ಜನರು ಲಾಠಿ ಹಿಡಿದು ತಿರುಗುವ ಪರಿಸ್ಥಿತಿ ನಿರ್ಮಾಣ ಆಗುತ್ತೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಎಸ್‍ಎಂಕೆ ಸರಿಯಾದ ಆಯ್ಕೆ – ಸಿಎಂಗೆ ಪ್ರತಾಪ್ ಸಿಂಹ ಅಭಿನಂದನೆ

ಪೊಲೀಸ್ ಇಲಾಖೆ ದಾಳಿ ಮಾಡಿದವರ ಮೇಲೆ ಯಾವ ಕೇಸ್ ಹಾಕಿದೆ, ಈ ಪ್ರಕರಣದಲ್ಲಿ ಯಾರ ಒತ್ತಡ ಇತ್ತು. ಉದ್ಯೋಗಕ್ಕಾಗಿ ಯಾಕೆ ಯುವಕ ಯುವತಿಯರು ಮಂಗಳೂರಿಗೆ ಬರ್ತಿಲ್ಲ, ಯಾರೋ ಒಬ್ಬ ರೌಡಿ ರೋಡಲ್ಲಿ ಹೊಡಿತಾರೆ ಎಂದರೆ ಯಾರಾದರೂ ಕಳುಹಿಸುತ್ತಾರಾ? ಆತ್ಮವಿಶ್ವಾಸ ಧೈರ್ಯ ತುಂಬುವ ಕೆಲಸ ಪೊಲೀಸರು ಮಾಡಬೇಕಿತ್ತು. ಆದರೆ ಆರೋಪಿಗಳು ಬೆಳಗ್ಗೆ ಹೋಗಿ ಸಂಜೆ ಜಾಮೀನಿನ ಮೇಲೆ ಹೊರಗೆ ಬರ್ತಾರೆ. ನಾನು ಸಚಿವನಾಗಿದ್ದಾಗ ಇಂತಹದಕ್ಕೆ ಅವಕಾಶ ಕೊಟ್ಟಿಲ್ಲ, ರೌಡಿಗಳಿಗೆ ಈ ಹಿಂದೆ ಭಯವಿತ್ತು. ಪೊಲೀಸ್ ಇಲಾಖೆಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಹಕಾರ ಕೊಡುತ್ತದೆ. ರೌಡಿಗಳಿಗೆ, ಸಮಾಜದ್ರೋಹಿ ಶಕ್ತಿಗಳಿಗೆ ತಕ್ಕ ಶಾಸ್ತ್ರಿ ಮಾಡಬೇಕು, ಯಾವುದೇ ಧರ್ಮದವರಾದ್ರೂ ಅವು ಸಮಾಜ ದ್ರೋಹಿ ಶಕ್ತಿಗಳು ನಿಜವಾದ ದೇಶದ್ರೋಹಿಗಳು ಇವರೇ ಎಂದರು.

Share This Article
Leave a Comment

Leave a Reply

Your email address will not be published. Required fields are marked *