ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

Public TV
1 Min Read

ಬೆಳಗಾವಿ: ಮಂಗಳೂರು ಆಯ್ತು ಈಗ ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ ವರದಿಯಾಗಿದೆ. ಅನ್ಯಧರ್ಮದ ಯುವಕನ ಜೊತೆ ಯುವತಿ ಕಾಣಿಸಿಕೊಂಡಿದ್ದಕ್ಕೆ  ಪುಂಡರು ಇಬ್ಬರನ್ನು ಥಳಿಸಿದ್ದಾರೆ.

ಅಕ್ಟೋಬರ್ 14ರಂದು ರಾಯಭಾಗದ ಯುವಕ ಮತ್ತು ಸಂಕೇಶ್ವರದ ಯುವತಿ ಬೆಳಗಾವಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಬಸ್ ನಿಲ್ದಾಣದಲ್ಲಿದ್ದ ಆಟೋ ಚಾಲಕನಲ್ಲಿ ಉದ್ಯಾನವನಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದ್ದರು.

ಆಟೋ ಚಾಲಕ ಉದ್ಯಾನವನದ ಬದಲು ಅಮನ್ ನಗರದ ನಿರ್ಜನ ಪ್ರದೇಶದ ಹೊಲಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಸ್ನೇಹಿತರ ಜೊತೆಗೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

ಬೇರೆ ಧರ್ಮದ ಯುವಕನ ಜೊತೆಗೆ ಓಡಾಡ್ತೀಯಾ ಎಂದು ಥಳಿಸಿದ್ದಾರೆ. ಅವರ ಬಳಿ ಇದ್ದ 20 ಸಾವಿರ ರೂ.ಮೌಲ್ಯದ ಮೊಬೈಲ್, 50 ಸಾವಿರ ರೂ. ನಗದು ಹಣ ಮತ್ತು ಆಧಾರ್‌ ಕಾರ್ಡ್, ಎಟಿಎಂ ಕಾರ್ಡ್ ಕಸಿದುಕೊಂಡು ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಟ ರಾಘವೇಂದ್ರ ರಾಜ್‍ಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಹಲ್ಲೆ ನಡೆಸಿದ ಬಳಿಕ ಬೆಳಗಾವಿಯ ಮಾಳಮಾರುತಿ ಠಾಣೆಯಲ್ಲಿ ಯುವತಿ 20 ಜನರು ನನ್ನ ಮೇಲೆ ರಾಡ್‌, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಳು. ದೂರಿನ ಮೇರೆಗೆ ಬೆಳಗಾವಿ ನಗರದ ಆಟೋ ಚಾಲಕ, ದಾವತ್ ಕತೀಬ್, ಅಯುಬ್, ಯುಸೂಫ್ ಪಠಾಣ ಬಂಧಿಸಲಾಗಿದ್ದು ಉಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *