ಸಾಗರದ ಮಾಲ್ವೆ ಬಳಿ ಕಾರು ಅಪಘಾತ – ಚಾಲಕ ಸ್ಥಳದಲ್ಲೇ ಸಾವು

Public TV
1 Min Read

– ಕಾರಿನಲ್ಲಿದ್ದ 10 ಮಂದಿ ಮಹಿಳೆಯರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ಅಪಘಾತವಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 10 ಮಂದಿ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಮಾಲ್ವೆ ಸಮೀಪ ನಡೆದಿದೆ.

ಮೃತಪಟ್ಟ ಚಾಲಕನನ್ನು ಸುರೇಶ್(42) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ತಾಲೂಕಿನ ಕೆಳದಿಪುರ ಗ್ರಾಮದಿಂದ ಸಾಗರದ ಶಾಹಿ ಗಾರ್ಮೆಂಟ್ಸ್ ಗೆ ಮಹಿಳೆಯರನ್ನು ಕರೆದುಕೊಂಡು ಬರುತ್ತಿದ್ದ ಮಾರುತಿ ಓಮಿನಿ ಕಾರ್ ಚಾಲಕ ಸುರೇಶ್ ಅವರ ನಿಯಂತ್ರಣ ತಪ್ಪಿ ಗಾಡಿ ಪಲ್ಟಿ ಹೊಡೆದಿದೆ. ಇದನ್ನೂ ಓದಿ: ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ ಬರೆಯಲು ಯತ್ನಿಸಿದ ನಕಲಿ ಅಭ್ಯರ್ಥಿ ಪೊಲೀಸರ ವಶ

ಈ ಪರಿಣಾಮ ಬಸ್ಸಿಗಾಗಿ ಕಾಯುತ್ತಿದ್ದ 5 ಮಂದಿ ಮಹಿಳೆಯರಿಗೆ ಕಾರು ಡಿಕ್ಕಿ ಹೊಡೆದಿದೆ. ಇನ್ನು ಕಾರಿನಲ್ಲಿದ್ದ 5 ಜನ ಮಹಿಳೆಯರು ಹಾಗೂ ಬಸ್ಸಿಗಾಗಿ ಕಾಯುತ್ತಿದ್ದ ಐವರಿಗೆ ಗಾಯವಾಗಿದೆ. ಗಂಭೀರ ಗಾಯಗೊಂಡ ಓರ್ವ ಯುವತಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇನ್ನುಳಿದ ಗಾಯಾಳುಗಳಿಗೆ ಸಾಗರದ ಉಪವಿಭಾಗೀಯ ಆಸ್ಪತ್ರೆಯ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಹರತಾಳು ಹಾಲಪ್ಪ ಹಾಗು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಇದನ್ನೂ ಓದಿ:ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

Share This Article
Leave a Comment

Leave a Reply

Your email address will not be published. Required fields are marked *