ಬೆತ್ತಲಾಗಿ ಕಳ್ಳತನ – ಅಂತರಾಜ್ಯ ಕಳ್ಳ ದಂಪತಿ ಅರೆಸ್ಟ್

Public TV
1 Min Read

ಬಾಗಲಕೋಟೆ: ಅಂತರಾಜ್ಯ ಕಳ್ಳ ದಂಪತಿಯನ್ನು ಬಾದಾಮಿ ಪೊಲೀಸರು ಜಾಲ ಬೀಸಿ ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ, ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆಲ ಭಾಗಗಳಲ್ಲಿ ಭಾರೀ ಪ್ರಮಾಣದ ಕಳ್ಳತನವಾದ ಪ್ರಕರಣಗಳು ನಡೆದು ಹೋಗಿದ್ದವು. ಈ ಹಿನ್ನೆಲೆ ಪ್ರಕರಣಗಳು ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಕಳ್ಳತನ ಮಾಡಿದ ಆರೋಪಿಗಳ ಪತ್ತೆಗಾಗಿ ಬಾದಾಮಿ ಪೊಲೀಸರು ಜಾಲ ಬೀಸಿದ್ದರು. ಇದನ್ನೂ ಓದಿ: ಹಿಟ್ಟಿನ ಗಿರಣಿಗೆ ಸಿಲುಕಿದ ತಾಯಿಯನ್ನು ರಕ್ಷಿಸಿದ ಪುತ್ರ

ದಂಪತಿಯಿಂದ ಕಳ್ಳತನ ನಡೆದಿದೆ ಎಂಬ ಮಾಹಿತಿ ಆಧಾರದ ಮೇಲೆ, ಬಾದಾಮಿ ಪೊಲೀಸರು ಅವರ ಮೇಲೆ ಕಳೆದ ಗುರುವಾರವೇ ಬಂಧಿಸಲು ಬಲೆ ಬೀಸಿದ್ದರು. ಇಂದು ಬಾದಾಮಿ ಪೊಲೀಸ್ ಸಿಪಿಐ ರಮೇಶ್ ಹಾನಾಪೂರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳಾದ ಸುರೇಶ್ ಶಿವಪೂರೆ ಮತ್ತು ಬಸಮ್ಮ ಸುರೇಶ್ ಶಿವಪೂರೆ ದಂಪತಿಯಿಂದ 10,50,000 ಮೌಲ್ಯದ ಚಿನ್ನಾಭರಣ, 15,000 ಮೌಲ್ಯದ ಬೆಳ್ಳಿ ಆಭರಣ, ಕಳ್ಳತನಕ್ಕೆ ಬಳಸಿದ ಮೋಟರ್ ಸೈಕಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳು ಮಹಾರಾಷ್ಟ್ರ ಹಾಗೂ ಕರ್ನಾಟಕದ ಬಹುತೇಕ ಭಾಗದಲ್ಲಿ ಕಳ್ಳತನ ಮಾಡಿದ್ದಾರೆ. ಈ ಆಧಾರದ ಮೇಲೆ ದಂಪತಿ ಮೇಲೆ ಒಟ್ಟು 46 ಪ್ರಕರಣಗಳು ದಾಖಲಾಗಿವೆ.

ವಿಶೇಷ ಎಂದರೆ ಸುರೇಶ್ ಕಳ್ಳತನ ಮಾಡುತ್ತಿದ್ದ ಪರಿಯೇ ವಿಚಿತ್ರವಾಗಿದೆ. ಬಟ್ಟೆ ಬಿಚ್ಚಿ ಬೆತ್ತಲಾಗಿ ಕಳ್ಳತನ ಮಾಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ್ದನ್ನ ನೋಡಿ, ಬೆತ್ತಲಾಗಿ ದೇಹಕ್ಕೆ ಎಣ್ಣೆ ಬಳಿದುಕೊಂಡು ಕೀಲಿ ಹಾಕಿದ ಮನೆಗೆ ಒಂಟಿಯಾಗಿ ನುಗ್ಗಿ ಕಳ್ಳತನ ಮಾಡುತ್ತಿದ್ದನು.

ಬಸಮ್ಮ ಸುರೇಶ್ ಕಳ್ಳತನಕ್ಕೆ ಸಹಾಯ ಮಾಡ್ತಿದ್ದಳು. ಇವರು ಹಿಂಬಾಗಿಲಿನಿಂದ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿಯನ್ನು ಸೆರೆ ಹಿಡಿಯಲು ಬಾದಾಮಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಡಿಎಸ್ ಪಿ ಚಂದ್ರಕಾಂತ್ ನಂದರೆಡ್ಡಿ ಅವರು ಮಾರ್ಗದರ್ಶನ ಮಾಡಿದ್ದರು. ಇದನ್ನೂ ಓದಿ: ಯುವತಿಯ ಹೊಟ್ಟೆಯಲ್ಲಿ ಒಂದೂವರೆ ಕೆಜಿ ಕೂದಲು – ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರು

Share This Article
Leave a Comment

Leave a Reply

Your email address will not be published. Required fields are marked *