ರಾಜ್ಯದಲ್ಲಿ 282 ಕೇಸ್ – 15 ಮಂದಿಯಲ್ಲಿ ಕಾಣಿಸಿಕೊಂಡ AY 12 ಪ್ರಭೇದ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 282 ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು 13 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದಿನ ವರೆಗೆ ಒಟ್ಟು 15 ಎವೈ-12 ಕೊರೊನಾ ಪ್ರಭೇದ ಕಾಣಿಸಿಕೊಂಡಿದೆ. ಬೆಂಗಳೂರು ನಗರದಲ್ಲಿ 142 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 174 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, 6 ಮರಣ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 349 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,430 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,86,835 ಮಂದಿಗೆ ಕೊರೊನಾ ಬಂದಿದೆ. 29,40,339 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.4.60 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.24 ರಷ್ಟಿದೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ

ಇಂದು ರಾಜ್ಯದಲ್ಲಿ ಇಂದು ಒಟ್ಟು 4,90,315 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 1,17,351 ಸ್ಯಾಂಪಲ್ (ಆರ್‍ಟಿ ಪಿಸಿಆರ್ 93,617 + 23,734 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಶಾಲೆ ಆರಂಭವಾದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಹಾಜರಾತಿ ಕಡಿಮೆ ಇದೆ: ಬಿ.ಸಿ ನಾಗೇಶ್

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 142, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 4, ಚಿತ್ರದುರ್ಗ 3, ದಕ್ಷಿಣ ಕನ್ನಡ 28, ದಾವಣಗೆರೆ 1, ಧಾರವಾಡ 1, ಗದಗ 0, ಹಾಸನ 18, ಹಾವೇರಿ 0, ಕಲಬುರಗಿ 0, ಕೊಡಗು 31, ಕೋಲಾರ 1, ಕೊಪ್ಪಳ 0, ಮಂಡ್ಯ 5, ಮೈಸೂರು 18, ರಾಯಚೂರು 1, ರಾಮನಗರ 3, ಶಿವಮೊಗ್ಗ 2, ತುಮಕೂರು 9, ಉಡುಪಿ 2, ಉತ್ತರ ಕನ್ನಡ 4, ವಿಜಯಪುರ, ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *