ಮಹಿಳಾ ಸೌಹಾರ್ದ ಸಹಕಾರಿ ಬ್ಯಾಂಕ್‌ಗೆ ಕನ್ನ ಹಾಕಿದ ಖದೀಮರು!

Public TV
1 Min Read

ವಿಜಯಪುರ: ಇಲ್ಲಿನ ಬೆಂಡಿಗೇರಿ ಗಲ್ಲಿಯಲ್ಲಿ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್‌ಗೆ ಖದೀಮರು ಕನ್ನಾ ಹಾಕಿದ ಘಟನೆ ನಡೆದಿದೆ.

ಬೆಲೆಬಾಳುವ ವಸ್ತುಗಳು ಸೇರಿದಂತೆ ನಗದು ದೋಚಿಕೊಂಡು ಖದೀಮರು ಪರಾರಿಯಾಗಿದ್ದಾರೆ. ನಗರದ ಕ್ರೆಡಿಟ್ ಮಹಿಳಾ ಸೌಹಾರ್ದ ಸಹಕಾರಿ ನಿಯಮಿತದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪೂಜೆ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಕೆರೆಯಲ್ಲಿ ಸಿಲುಕಿದ್ದ ಪಕ್ಷಿ ರಕ್ಷಿಸಲು ಹೋಗಿ ಪ್ರಾಣಬಿಟ್ಟ ಯುವಕ!

ಕಳ್ಳರು ತಡರಾತ್ರಿ ಬಾಗಿಲಿನ ಬೀಗ ಮುರಿದು ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

Share This Article
Leave a Comment

Leave a Reply

Your email address will not be published. Required fields are marked *