ಮಹಿಳೆಯರ ಕಷ್ಟ ಅವರಿಗೆ ಮಾತ್ರ ಗೊತ್ತು : ಪ್ರಿಯಾಂಕಾ ವಾದ್ರಾ

Public TV
1 Min Read

ನವದೆಹಲಿ: ಉತ್ತರಪ್ರದೇಶ ಮಹಿಳೆಯರು ಆಭರಣ ಧರಿಸಿ ಮಧ್ಯರಾತ್ರಿ ಎಲ್ಲಿಗೆ ಬೇಕಾದರೂ ತೆರಳಬಹುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಕಿಡಿಕಾರಿದ್ದಾರೆ.

ಪ್ರತಿನಿತ್ಯ ಯಾವ ಸಂಕಷ್ಟ ಎದುರಿಸಬೇಕು ಎಂಬುದು ಉತ್ತರ ಪ್ರದೇಶದ ಮಹಿಳೆಯರಿಗೆ ಮಾತ್ರ ಗೊತ್ತು ಎಂದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ದೇಶದ ಗೃಹ ಸಚಿವರು ಆಭರಣಗಳನ್ನು ಧರಿಸುತ್ತಾರೆ ಎಂದು ಹೇಳುತ್ತಾರೆ, ಆದರೆ ಅವರು ಪ್ರತಿದಿನ ಯಾವ ರೀತಿಯ ವಿಷಯಗಳನ್ನು ಎದುರಿಸಬೇಕೆಂದು ಉತ್ತರಪ್ರದೇಶ ಮಹಿಳೆಯರಿಗೆ ಮಾತ್ರ ತಿಳಿದಿದೆ ಎಂದು ಟ್ವೀಟ್‍ಮಾಡಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ:  ಕಂಗನಾಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯುವಂತೆ ನವಾಬ್ ಮಲ್ಲಿಕ್ ಒತ್ತಾಯ

ಹೀಗಾಗಿಯೇ ಲಡ್ಕಿ ಹೂಂ, ಲಢ್ ಸಕ್ತಿ ಹೂಂ ಬೇಕು. ರಾಜಕೀಯದಲ್ಲಿ ಮತ್ತು ಭದ್ರತೆಗೆ ಸಂಬಂಧಿಸಿದ ನೀತಿಗಳನ್ನು ರೂಪಿಸುವಲ್ಲಿ ಮಹಿಳೆಯರ ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಹೇಳಿದ್ದು, ಕಾನ್ಪುರದಲ್ಲಿ ಮೂವರು ಮಹಿಳೆಯರ ಸರ ಅಪಹರಣದ ಬಗ್ಗೆ ಪ್ರಿಯಾಂಕಾ ಟ್ವಿಟ್ಟರ್ ನಲ್ಲಿ ಮಾಧ್ಯಮ ವರದಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್

Share This Article
Leave a Comment

Leave a Reply

Your email address will not be published. Required fields are marked *