ನೆಲಮಂಗಲದಲ್ಲಿ ಮಂಗಳಮುಖಿ ಆತ್ಮಹತ್ಯೆ – ಪೊಲೀಸರಿಂದ ತನಿಖೆ

Public TV
1 Min Read

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ ಟೋಲ್ ಬಳಿ ಹಮಾಮ್ ನಡೆಸಿ ಜೀವನ ನಿರ್ವಹಿಸುತ್ತಿದ್ದ ಮಂಗಳಮುಖಿ, ತಾನು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ನಗರಸಭೆ ವ್ಯಾಪ್ತಿಯ ಜಕ್ಕಸಂದ್ರ ಗ್ರಾಮದ ನಿವಾಸಿ ಮಾಯಾ(33) ಮೃತ ಮಂಗಳಮುಖಿ. ಮಾಯಾ ಅವರನ್ನು ಹೊಳೆನರಸೀಪುರದ ನೇರಳಿ ಗ್ರಾಮದ ಮೂಲದವರು ಎನ್ನಲಾಗುತ್ತಿದೆ. ಮಾಯಾ ಕಳೆದ 3 ವರ್ಷದಿಂದ ಚಕ್ಕಸಂದ್ರ ಗ್ರಾಮದ ನಿವಾಸಿ ಜಯಮ್ಮ ಎಂಬವರ ಮನೆಯನ್ನ ಬಾಡಿಗೆ ಪಡೆದು ವಾಸವಾಗಿದ್ದರು. ಇದನ್ನೂ ಓದಿ: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರ್ತಾನೆ: ಜಗ್ಗೇಶ್

ರಾ.ಹೆದ್ದಾರಿ ತುಮಕೂರು ರಸ್ತೆಯ ಜಾಸ್ ಟೋಲ್ ಬಳಿ ಹಮಾಮ್ ನಡೆಸುತ್ತಿದ್ದು, ಇಂದು ಬೆಳಿಗ್ಗೆ ಬಾಗಿಲು ತೆಗೆಯದ ಕಾರಣ ಪಕ್ಕದ ಮನೆಯ ನಿವಾಸಿ, ಮನೆಯ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಬಂದು ಮನೆಯ ಕಿಟಕಿಯಲ್ಲಿ ನೋಡಿದ್ದಾಗ ಕೋಣೆಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಕೂಡಲೇ ನೆಲಮಂಗಲ ಟೌನ್ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ನೆಲಮಂಗಲ ಟೌನ್ ಪೊಲೀಸರು ಬಾಗಿಲು ಒಡೆದು ಪರಿಶೀಲನೆ ನಡೆಸಿದರು. ನಂತರ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಭೇಟಿಯಾದ ಸಚಿನ್

Share This Article
Leave a Comment

Leave a Reply

Your email address will not be published. Required fields are marked *