ತೇವಾಂಶ ಹೆಚ್ಚಳದಿಂದ ಸಾವಿರಾರು ಹೆಕ್ಟೇರ್ ಕಡಲೆ ಬೆಳೆ ಹಾನಿ

Public TV
1 Min Read

ರಾಯಚೂರು: ಮಳೆ ನಿಂತರೂ ಮಳೆ ಹನಿಯ ಎಫೆಕ್ಟ್ ಜಿಲ್ಲೆಯ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ನವೆಂಬರ್ ಕೊನೆ ವಾರದಲ್ಲಿ ಸುರಿದ ಮಳೆಯಿಂದ ಕಡಲೆ ಬೆಳೆ ಹಾಳಾಗಿದೆ. ತೇವಾಂಶ ಹೆಚ್ಚಾಗಿ ಜಮೀನಿನಲ್ಲೇ ಕಡಲೆ ಬೆಳೆ ಕೊಳೆತಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅತೀ ಹೆಚ್ಚು ಹಾನಿಯಾಗಿದೆ. ಇದನ್ನೂ ಓದಿ: ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

ಇನ್ನೇನು ಕಾಯಿ ಬಿಡುವ ಹಂತಕ್ಕೆ ಬಂದಿದ್ದ ಕಡಲೆ ಬೆಳೆ ಸಂಪೂರ್ಣ ಹಾನಿಯಾಗಿದೆ. ಸಿಂಧನೂರು ಹಾಗೂ ಮಸ್ಕಿ ತಾಲೂಕಿನ ಸುಮಾರು 10 ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬೆಳೆದಿದ್ದ ಕಡಲೆ ಹಾಳಾಗಿದ್ದು, ಕಡಲೆ ಬೆಳೆ ಕಳೆದುಕೊಂಡು ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಜಮೀನಿನಲ್ಲೇ ಬೆಳೆ ಹಾಳಾಗಿರುವುದರಿಂದ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ

Share This Article
Leave a Comment

Leave a Reply

Your email address will not be published. Required fields are marked *