ಸಿಲಿಂಡರ್ ಸ್ಪೋಟ – ಬೆಂಗಳೂರಿನ ಮಸೀದಿ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ

Public TV
1 Min Read

ಬೆಂಗಳೂರು: ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಆವರಿಸಿದ ಘಟನೆ ನಗರದ ನಾಗವಾರದ ಉಮರ್ ಬಿನ್ ಖತಬ್ ಮಸೀದಿ  ಕಾಂಪ್ಲೆಕ್ಸ್‌ನಲ್ಲಿ ನಡೆದಿದೆ.

ಮಸೀದಿ ಕಾಂಪ್ಲೆಕ್ಸ್ ನಲ್ಲಿದ್ದ ಗ್ಯಾಸ್ ಸ್ಟವ್ ರಿಪೇರಿ ಮತ್ತು ಗ್ಯಾಸ್ ಮಾರಾಟ ಮಾಡುತ್ತಿದ್ದ ಅಂಗಡಿಯಲ್ಲಿ ಈ ಸಿಲಿಂಡರ್ ಸ್ಪೋಟವಾಗಿದ್ದು, ಘಟನೆಯಲ್ಲಿ ಯಾರಿಗೂ ಯಾವುದೇ ಅನಾಹುತವಾಗಿಲ್ಲ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕದಳ ಬೆಂಕಿ ನಂದಿಸಿದ್ದಾರೆ ಎಂದು ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಅಗ್ನಿಶಾಮಕ ಇಲಾಖೆ ಮಾಹಿತಿ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

ಶಾರ್ಟ್ ಸಕ್ರ್ಯೂಟ್ ನಿಂದ ಈ ಸಿಲಿಂಡರ್ ಸ್ಪೋಟಗೊಂಡಿದ್ದು, ಮಸೀದಿಗೆ ಯಾವುದೇ ರೀತಿಯ ತೊಂದರೆ ಆಗಿಲ್ಲ. ಘಟನೆಯಲ್ಲಿ ಮಾಲೀಕರಿಗೆ ಹಾಗೂ ಕೆಲಸದ ಸಿಬ್ಬಂದಿಗೆ ಸಣ್ಣ ಮಟ್ಟದ ಗಾಯಗಳಾಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಬೆಳಿಗ್ಗೆ 11:30 ರ ಸುಮಾರಿಗೆ ಸ್ಪೋಟ ವಾಗಿದೆ ಎಂದು ಸ್ಥಳೀಯ ನಿವಾಸಿ ರಹಮತುಲ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ ಮುಂದೂಡಿ, ರ‍್ಯಾಲಿ-ಸಮಾರಂಭ ನಿಲ್ಲಿಸಿ: ಚುನಾವಣಾ ಆಯೋಗ, ಕೇಂದ್ರಕ್ಕೆ ಕೋರ್ಟ್‌ ಒತ್ತಾಯ

Share This Article
Leave a Comment

Leave a Reply

Your email address will not be published. Required fields are marked *