ಅತಿಥಿ ಉಪನ್ಯಾಸಕರ ಬೇಡಿಕೆ, ಒಂದೆರಡು ದಿನದಲ್ಲಿ ಸಿಹಿಸುದ್ದಿ-ಅಶ್ವಥ್ ನಾರಾಯಣ

Public TV
2 Min Read

ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!

ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಬರದನಾಡಲ್ಲಿ ಗ್ರಾಮೀಣ ರಸ್ತೆ, ಅಂತರ್ಜಲ ಮಟ್ಟ ಹೆಚ್ಚಿಸಲು ಒತ್ತು: ತಿಪ್ಪಾರೆಡ್ಡಿ

Share This Article
Leave a Comment

Leave a Reply

Your email address will not be published. Required fields are marked *