ಚಾಮರಾಜನಗರ: 5 ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಯೊಬ್ಬ ಬುಧವಾರ ಮೇಕೆದಾಟು ಪಾದಯಾತ್ರೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಕ ಪ್ರತ್ಯಕ್ಷನಾಗಿದ್ದಾನೆ.
ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ ಸಿದ್ದರಾಜು ತಲೆ ಮರಸಿಕೊಂಡಿರುವ ಪ್ರಮುಖ ಆರೋಪಿ. ಜಾತಿನಿಂದನೆ ಪ್ರಕರಣ ಸೇರಿದಂತೆ ಇನ್ನಿತರ ಪ್ರಕರಣಗಳ ಆಧಾರದ ಮೇಲೆ ಈತನ ವಿರುದ್ಧ ಸಮನ್ಸ್ ಜಾರಿಯಾಗಿತ್ತು. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ
ಸಮನ್ಸ್ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲು ಬೇಗೂರು ಮಹಿಳಾ ಪಿಎಸ್ಐ, ಎಎಸ್ಐ ಮತ್ತು 3 ಕಾನ್ಸ್ಟೇಬಲ್ಗಳು ತೆರಳಿದ್ದರು. ಈ ವೇಳೆ ಆರೋಪಿ ಸೇರಿದಂತೆ 15 ಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಮಂಗಳವಾರ ತಡರಾತ್ರಿ ಗುಂಪು ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು
ಹಲ್ಲೆ ಬಳಿಕ ಪರಾರಿಯಾಗಿದ್ದ ಸಿದ್ದರಾಜು ನೇರ ಮೇಕೆದಾಟು ಪಾದಯಾತ್ರೆಗೆ ಹೋಗಿದ್ದು, ಸಿದ್ದರಾಮಯ್ಯ ಬಳಿ ತೆರಳಿ ನಿಂತಿದ್ದ ಫೋಟೋ ಈಗ ಲಭ್ಯವಾಗಿದೆ.