ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ

Public TV
1 Min Read

ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕುರಿತು ಯಾರು ಏನೇ ಮಾತನಾಡಿದರೂ ನಾನು ಪ್ರತಿಕ್ರಿಯೆ ಕೊಡೊಲ್ಲ ಎಂದು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡ ಹೇಳಿದರು.

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ಕೈಬಿಟ್ಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಮಾಜಿ ಪ್ರಧಾನಿ ಆಗಿದ್ದು, ಮೇಕೆದಾಟು ಯೋಜನೆಯ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ಕೇಸ್ ಇದೆ. ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಮಾತಾಡುವುದು ಸರಿಯಾಗುದಿಲ್ಲ. ಯಾರು ಏನೇ ಮಾತನಾಡಿದರು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

ಎರಡು ರಾಷ್ಟ್ರೀಯ ಪಕ್ಷಗಳು ಈ ವಿಚಾರವಾಗಿ ಪುಟಗಟ್ಟಲೇ ಜಾಹೀರಾತು ನೀಡಿದ್ದಾರೆ. ಸುಪ್ರೀಂ ಕೋರ್ಟ್‍ನಲ್ಲಿ 25 ರಂದು ಈ ಯೋಜನೆಯೂ ವಿಚಾರಣೆಗೆ ಬರುತ್ತಿದೆ. ಅಲ್ಲಿ ಏನ್ ಆಗುತ್ತೋ ನೋಡೋಣ ಎಂದು ನುಡಿದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

Share This Article
Leave a Comment

Leave a Reply

Your email address will not be published. Required fields are marked *