ಹಿಮಪಾತದೊಳಗೆ ಸಿಲುಕಿದ್ದ 30 ಮಂದಿಯ ರಕ್ಷಣೆ

Public TV
1 Min Read

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ಚಲಿಸುತ್ತಿದ್ದ ವಾಹನದ ಮೇಲೆ ಹಿಮಪಾತವಾಗಿದ್ದು, ಅದರಲ್ಲಿ ಸಿಲುಕಿಕೊಂಡಿದ್ದ ಮಗು ಸೇರಿ 30 ಮಂದಿಯನ್ನು ಸತತ 6 ಗಂಟೆಗಳ ಕಾರ್ಯಾಚರಣೆ ನಡೆಸಿ ಭಾರತೀಯ ಸೇನೆ ಯೋಧರು ರಕ್ಷಿಸಿದ್ದಾರೆ.

ಘಟನೆಯು ತಂಗಧಾರ್-ಚೌಕಿಬಾಲ್ ಆಕ್ಸಿಸ್ ಬಳಿ ನಡೆದಿದೆ. ಖೂನಿ ನಾಲಾ ಮತ್ತು ಎಸ್‍ಎಂ ಹಿಮಪರ್ವತದ ಹತ್ತಿರವಿರುವ ಎನ್‍ಎಚ್ 701 ರಸ್ತೆಯಲ್ಲಿ ವಾಹನವು ಚಲಿಸುತ್ತಿದ್ದ ಸಂದರ್ಭದಲ್ಲಿ ಹಿಮಪಾತವಾಗಿ ನಾಗರಿಕರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಇದನ್ನೂ ಓದಿ: ಹಿಂದೂ ಮಹಿಳೆ, ಮುಸ್ಲಿಂ ವ್ಯಕ್ತಿ ರೈಲಿನಲ್ಲಿ ಪ್ರಯಾಣ – ಲವ್ ಜಿಹಾದ್ ಅಂತ ಠಾಣೆಗೆ ಎಳೆದೊಯ್ದ ಭಜರಂಗದಳ ಸದಸ್ಯರು

ಈ ವೇಳೆ ತಕ್ಷಣ ಭಾರತೀಯ ಸೇನೆಯ ಹಿಮಪಾತ ರಕ್ಷಣಾ ತಂಡಗಳಾದ 2 ರಕ್ಷಣಾ ತಂಡಗಳು ಮತ್ತು (ಜಿಆರ್‍ಇಎಫ್) ಜನರಲ್ ರಿಸರ್ವ್ ಎಂಜಿನಿಯರ್ ಫೋರ್ಸ್  ಸತತ  6 ಗಂಟೆಗಳ ಕಾರ್ಯಾಚರಣೆ ನಡೆಸಿತ್ತು. ವಾಹನದಲ್ಲಿದ್ದ ಜನರನ್ನು ರಕ್ಷಸಿದ್ದೇವೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಭಾರತೀಯ ಯೋಧರು ಹಿಮಪಾತದಲ್ಲಿ ಸಿಲುಕಿರುವ 30 ಮಂದಿಯನ್ನು ರಕ್ಷಿಸಿ 14 ಜನರನ್ನು ನಿಲಂಗೆ ಮತ್ತು ಇನ್ನೂ 16 ಜನರನ್ನು ನಗರದ ಎಸ್‍ಸಿ ಪಾಸ್‍ಗೆ ಸ್ಥಳಾಂತರಿಸಲಾಗಿದೆ. ರಕ್ಷಿಸಲ್ಪಟ್ಟ ನಾಗರಿಕರಿಗೆ ರಾತ್ರಿ ಆಹಾರ, ವೈದ್ಯಕೀಯ ಸೌಲಭ್ಯಗಳನ್ನು ಸಹ ನೀಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: BJP ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದು ಪಕ್ಷದ ಮೊದಲ ಗುರಿ: ಓವೈಸಿ

ಅದೇ ರಸ್ತೆಯ ಇನ್ನೊಂದು ಭಾಗದಲ್ಲಿ 16 ಜನರ ಮತ್ತೊಂದು ಗುಂಪು ಸಿಲುಕಿಕೊಂಡಿದ್ದು, ಅವರನ್ನೂ ಸಹ ರಕ್ಷಿಸುವ ಭರವಸೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *