ಮಗನಿಗೆ ಪುನೀತ್ ಎಂದು ಹೆಸರಿಟ್ಟು ಅದ್ಧೂರಿ ಕಾರ್ಯಕ್ರಮ ಮಾಡಿದ ಅಪ್ಪು ಅಭಿಮಾನಿ

Public TV
1 Min Read

ಕೊಪ್ಪಳ: ಪುನೀತ್ ರಾಜ್‍ಕುಮಾರ್ ನಿಧನರಾಗಿ ತಿಂಗಳು ಕಳೆದರೂ ಅಪ್ಪು ಮೇಲಿನ ಅಭಿಮಾನವನ್ನು ಜನರು ಒಂದಲ್ಲ ಒಂದು ರೀತಿಯಲ್ಲಿ ತೋರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಕಡುಬಡತನದಲ್ಲಿದ್ದರೂ ದಂಪತಿ ಅದ್ಧೂರಿಯಾಗಿ ನಾಮಕರಣ ಕಾರ್ಯಕ್ರಮ ಮಾಡಿ ಮಗನಿಗೆ ಪುನೀತ್ ಎಂದು ಹೆಸರಿಟ್ಟಿದ್ದಾರೆ.

ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪೂರ ಗ್ರಾಮದಲ್ಲಿ ಪಕ್ಕೀರಪ್ಪ ಹಾಗೂ ಪಾರ್ವತಿ ಪುನೀತ್ ರಾಜ್‍ಕುಮಾರ್ ಅವರ ಅಭಿಮಾನಿಗಳು. ಈಗ ಇವರು ತಮ್ಮ ಮಗನಿಗೆ ಪುನೀತ್ ಎಂದು ನಾಮಕರಣ ಮಾಡಿ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಿದ್ದಾರೆ. ಇದನ್ನೂ ಓದಿ: ಮಗಳ ದಾಂಪತ್ಯ ಸರಿಪಡಿಸಲು ರಜನಿಕಾಂತ್ ಸರ್ಕಸ್

ಫಕೀರಪ್ಪ ಪುನೀತ್ ಅಭಿಮಾನಿಯಾಗಿದ್ದಾರೆ. ಅಪ್ಪು ನೆನಪಿಗಾಗಿ ಮಗನಿಗೆ ಪುನೀತ್ ಎಂದು ನಾಮಕರಣ ಮಾಡಿದ್ದಾರೆ. ಕಡು ಬಡತನದಲ್ಲಿದ್ದರೂ ಅಪ್ಪು ನೆನಪಿಗೆ ಅದ್ಧೂರಿ ಕಾರ್ಯಕ್ರಮದ ಮೂಲಕ ಮಗನಿಗೆ ನಾಮಕರಣ ಮಾಡಿದ್ದಾರೆ. ಅಪ್ಪು ಅಭಿಮಾನಕ್ಕೆ ಜನರ ಹಾಗೂ ಗ್ರಾಮಸ್ಥರಿಂದ ಮೆಚ್ಚುಗೆ ಹರಿದು ಬರುತ್ತಿದೆ. ಅಭಿಮಾನದ ಮುಂದೆ ಬಡತನ ಅಡ್ಡಿಯಾಗಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ನನ್ನ ಟ್ವಿಟ್ಟರ್ ರೀಚ್ ಇದ್ದಕ್ಕಿದ್ದಂತೆ ಕಡಿಮೆಯಾಗಿದೆ – ದಾಖಲೆ ಮುಂದಿಟ್ಟು ಪರಾಗ್‍ಗೆ ರಾಹುಲ್ ಪತ್ರ

Share This Article
Leave a Comment

Leave a Reply

Your email address will not be published. Required fields are marked *