ದಂಪತಿ ನಡುವೆ ಯಾವತ್ತೂ ಜಗಳವಾಗಿಲ್ಲ- ಬಿಲ್ಡಿಂಗ್ ಕನ್‌ಸ್ಟ್ರಕ್ಟರ್‌ ಖ್ವಾಜಾ ಹುಸೇನ್

Public TV
1 Min Read

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ನೆರೆಯೊರೆಯವರು ಮಾಧ್ಯಮದವರ ಜೊತೆಗೆ ಮಾತನಾಡಿದ್ದಾರೆ.


ಬಿಲ್ಡಿಂಗ್ ಕನ್‌ಸ್ಟ್ರಕ್ಷನ್ ಮಾಡುವ ಖ್ವಾಜಾ ಹುಸೇನ್ ಮಾಧ್ಯಮದವರ ಜೊತೆಗೆ ಮಾತನಾಡಿ, ದಂಪತಿ ನಡುವೆ ಯಾವತ್ತು ಜಗಳವಾಗಿಲ್ಲ. 9 ತಿಂಗಳ ಗಂಡು ಮಗು ಇದೆ. 2 ವರ್ಷದಿಂದ ಇದೇ ಅಪಾರ್ಟ್ ಮೆಂಟ್‍ನಲ್ಲಿ ವಾಸವಾಗಿದ್ದರು. ಮನೆಯಲ್ಲಿ ಓರ್ವ ಅಜ್ಜಿ ಮತ್ತು ಒಬ್ಬಾಕೆ ಕೆಲಸದಾಕೆ ಇದ್ದರು. ಬೆಳಗ್ಗೆ ನೀರಜ್ ಕೆಲಸಕ್ಕೆ ಹೋಗಿದ್ದರು. ಈ ಕೆಲಸದವರು ಬಾಗಿಲು ಬಡಿದರೂ ಸೌಂದರ್ಯ ಬಾಗಿಲು ತೆಗೆದಿಲ್ಲ. ಆಗ ನಾವೆಲ್ಲ ಪಕ್ಕದಲ್ಲೇ ಪೈಂಟಿಂಗ್ ಮಾಡುತ್ತಿದ್ದೆವು. 10.30 ರ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್‌ಗೆ ಒಳಗಾಗಿದ್ರಾ ಬಿಎಸ್‌ವೈ ಮೊಮ್ಮಗಳು?

ಸೌಂದರ್ಯ ಪತಿ ಕೆಲಸಕ್ಕೆ ಹೋದಾಗ ಘಟನೆ ನಡೆದಿದೆ. ಘಟನೆ ನಡೆದ ನಂತರ ಸೌಂದರ್ಯ ತಾಯಿ, ಅಣ್ಣ ಕುಟುಂಬಸ್ಥರು ಮೃತ ದೇಹ ತೆಗೆದುಕೊಂಡು ಹೋಗಿದ್ದಾರೆ. ಯಾವ ಪೊಲೀಸರೂ ಇಲ್ಲಿಗೆ ಬಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಮೊಮ್ಮಗಳು ನೇಣು ಬಿಗಿದು ಆತ್ಮಹತ್ಯೆ

ಪೇಟಿಂಗ್ ಕೆಲಸ ಮಾಡುತ್ತಿದ್ದ ಸೇಲ್ವ ಕುಮಾರ್ ಮಾತನಾಡಿ, ತಿಂಡಿ ರೆಡಿ ಮಾಡಿ ನಾವು ಕರೆಯುತ್ತಿದ್ದೇವೆ, ಆದರೆ ಬಾಗಿಲಿ ಓಪನ್ ಆಗುತ್ತಿಲ್ಲ ಎಂದು ಸೌಂದರ್ಯ ಅವರ ಮನೆಯ ಕೆಲಸದವರು ಬಂದು ನಮ್ಮನ್ನು ಕರೆದರು. ನಾವು ಹೋಗಿ ಬಾಗಿಲು ತೆರೆದಾಗ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಈ ವೇಳೆ ಇಬ್ಬರು ಕೆಲಸಗಾರರು ಅವರ ಮನೆಯಲ್ಲಿ ಇದ್ದರು. ನಂತರ ಅವರ ಮನೆಯ ಕೆಲಸಗಾರರು ಪೊಲೀಸ್ ಅವರಿಗೆ ಮಾಹಿತಿ ನೀಡಿದರು ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *