ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

Public TV
2 Min Read

ದಾವಣಗೆರೆ: ಬೆಣ್ಣೆ ನಗರಿಗೂ ಹಿಜಾಬ್ ವಿವಾದವು ಕಾಲಿಟ್ಟಿದ್ದು, ವಿದ್ಯಾರ್ಥಿಗಳು ಹೊನ್ನಾಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ.

ಮುಸ್ಲಿಂ ವಿದ್ಯಾರ್ಥಿಗಳು ಸರ್ಕಾರದ ಆದೇಶವಿದ್ದರೂ ಕೂಡ ಹಿಜಾಬ್ ಧರಿಸಿ ಬಂದಿದ್ದಾರೆ. ತರಗತಿಯಲ್ಲಿ ಬುರ್ಖಾ ಧರಿಸಿ ಬಂದ ಹಿನ್ನಲೆ ನಾವು ಕೂಡ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಿದ್ದೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದ್ದಾರೆ.

ಎಲ್ಲಿವರೆಗೆ ತರಗತಿಯಲ್ಲಿ ಹಿಜಾಬ್ ಇರುತ್ತದೆಯೋ ಅಲ್ಲಿಯವರೆಗೆ ಕೇಸರಿ ಶಾಲು ಧರಿಸಿಯೇ ಹಾಜರಾಗುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದರೆ ಹಿಜಬ್ ಧರಿಸಿದ ವಿದ್ಯಾರ್ಥಿನಿಯರು ನಾವು ಹಿಜಬ್ ಬುರ್ಕಾ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ನಾವು ಸರ್ಕಾರ ಎನೇ ಆದೇಶ ಹೊರಡಿಸಿದರು ಹಿಜಾಬ್ ತೆಗೆಯುವುದಿಲ್ಲ ಪಟ್ಟು ಹಿಡಿದಿದ್ದಾರೆ.

ಎರಡು ಬಣದ ವಿದ್ಯಾರ್ಥಿಗಳು ಸಮವಸ್ತ್ರ ನೀತಿ ಸಂಹಿತೆಗೆ ಕ್ಯಾರೆ ಎನ್ನುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ ತರಗತಿಯಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಹಾಕಿಕೊಂಡೇ ಕುಳಿತು ಪಾಠ ಕೇಳುತ್ತಿದ್ದು, ಪದವಿ ಕಾಲೇಜಿನಲ್ಲಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಕೊರೊನಾಗೆ ಗೆಳೆಯ ಮೃತ – ಸ್ನೇಹಿತನ ಮಡದಿಯನ್ನ ಮದುವೆಯಾದ ಯುವಕ 

ಹಿಜಾಬ್- ಕೇಸರಿ ಶಾಲು ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಾಲೇಜ್‍ಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ ಎಂದು ಶಾಸಕರಿಗೆ ಏರುಧ್ವನಿಯಲ್ಲೇ ವಿದ್ಯಾರ್ಥಿನಿಯರ ಉತ್ತರ ನೀಡಿದ್ದಾರೆ.

ನೀವು ಈ ರೀತಿ ಹಿಜಬ್ ಧರಿಸಿ ಬಂದರೆ ಅವರು ಕೇಸರಿ ಶಾಲು ಧರಿಸುತ್ತಾರೆ. ಇದು ಮತ್ತೆ ಸಂಘರ್ಷಕ್ಕೆ ಕಾರಣವಾಗುತ್ತೆ ಎಂದು ಸಮಾಧಾನ ಮಾಡಲು ಮುಂದಾದಾಗ ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆಗಲಿ ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ. ಹಿಜಬ್ ಹಾಕಿಕೊಂಡೇ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದು ಕುಳಿತ್ತಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

ದಾವಣಗೆರೆಯಲ್ಲಿ ತೀವ್ರ ಸ್ವರೂಪದ ಹೋರಾಟಕ್ಕೆ ಕಾರಣವಾದ ಹಿಜಬ್ ವಿವಾದವು ನಗರದ ಜಯದೇವ ಸರ್ಕಲ್‍ನಲ್ಲಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಂದ ಈ ಪ್ರತಿಭಟನೆ ನಡೆದಿದ್ದು, ನಾವು ಹಿಜಬ್ ನಿಯಮವನ್ನು ಪಾಲಿಸಿಯೇ ಪಾಲಿಸುತ್ತೇವೆ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಹಿಂದೂ ಜಾಗರಣಾ ವೇದಿಕೆಯು ತರಗತಿಗಳಲ್ಲಿ ಹಿಜಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ಸಂಘಟನೆಗಳ ಪ್ರತಿಭಟನೆ ನಡೆಸಿದ್ದಾರೆ. ಹಿಜಬ್ ವಿರೋಧಿಸಿ ಸಮವಸ್ತ್ರ ಧರಿಸಿ, ಹಿಂದೂಸ್ತಾನದಲ್ಲಿ ಇರುವುದಾದರೆ ಹಿಂದೂ ಧರ್ಮದವರು ಹೇಳಿದ ಹಾಗೇ ಕೇಳಬೇಕು ಅಂತ ಘೋಷಣೆ ಕೂಗಿದ್ದಾರೆ. ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನಲೆ ಜಯದೇವ ವೃತ್ತದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಿವೈಎಸ್ಪಿ ನರಸಿಂಹ ತಾಮ್ರಧ್ಬಜ, ಸಿಪಿಐ ಗುರುಬಸವರಾಜ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಎರ್ಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *