ಹಿಜಬ್‌-ಕೇಸರಿ ಶಾಲು ವಿವಾದ – ಕೇಂದ್ರ ಶಿಕ್ಷಣ ಸಚಿವರ ಮಧ್ಯಪ್ರವೇಶಕ್ಕೆ ಒತ್ತಾಯ

Public TV
1 Min Read

ನವದೆಹಲಿ: ಕರ್ನಾಟಕದಲ್ಲಿ ತಲೆದೋರಿರುವ ದುರದೃಷ್ಟಕರ ಘಟನೆ ಹಿಜಬ್‌-ಕೇಸರಿ ಶಾಲು ವಿವಾದ ಕುರಿತು ಮಧ್ಯಪ್ರವೇಶಿಸಬೇಕು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ ಕಮ್ಯುನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ-ಮಾರ್ಕ್ಸಿಸ್ಟ್‌ ನಾಯಕ ಎಲಮರಮ್‌ ಕರೀಂ ಅವರು ಒತ್ತಾಯಿಸಿದ್ದಾರೆ.

ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಬ್‌ ಧರಿಸಿದ್ದಕ್ಕಾಗಿ ತರಗತಿಗಳಿಗೆ ಹಾಜರಾಗುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಕೋಮು ಧ್ರುವೀಕರಣ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಅನಗತ್ಯ ವಿವಾದ ಸೃಷ್ಟಿಸುತ್ತಿರುವುದನ್ನು ಗಮನಿಸಬಹುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳಲ್ಲಿ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

ಈ ಬೆಳವಣಿಗೆ ಮುಸ್ಲಿಂ ಸಮುದಾಯದಲ್ಲಿ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಇಲ್ಲಿಯವರೆಗೂ ಮುಸ್ಲಿಂ ಹುಡುಗಿಯರು ಯಾವುದೇ ಆಕ್ಷೇಪವಿಲ್ಲದೇ ತಲೆಗೆ ಹಿಜಬ್‌ ಧರಿಸುತ್ತಿದ್ದರು. ಅವರು ಸಾಮಾನ್ಯ ಸಮವಸ್ತ್ರ ನಿಯಮ ಅನುಸರಿಸುತ್ತಿಲ್ಲ ಎಂದು ಹೇಳಿ ಹಿಜಬ್‌ಗೆ ಅನುಮತಿಸುತ್ತಿಲ್ಲ ಎಂದು

ಇಷ್ಟು ವರ್ಷಗಳಿಂದ ವಿದ್ಯಾರ್ಥಿನಿಯರು ಸಮವಸ್ತ್ರದ ಜೊತೆಗೆ ಹಿಜಾಬ್‌ ಧರಿಸುತ್ತಿದ್ದಾರೆ. ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಏಕರೂಪತೆ ಅನುಸರಿಸಲು ಶಿರಸ್ತ್ರಾಣದ ಬಣ್ಣವನ್ನು ಸಹ ಸೂಚಿಸಲಾಗಿದೆ. ಬೇರೆ ರೀತಿಯಲ್ಲಿ ಹೇಳುವುದಾದರೆ, ದಶಕಗಳವರೆಗೆ ಯಾವುದೇ ವಿವಾದಗಳಿಲ್ಲ. ಇದನ್ನು ಉದ್ದೇಶಪೂರ್ವಕವಾಗಿ ವಿಭಜನ್‌ ಮತ್ತು ಕೋಮು ಭಾವನೆಗಳನ್ನು ಕೆರಳಿಸಲು ತಯಾರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಹೇಳಿದಂತೆ ಮೈತುಂಬ ಬಟ್ಟೆ ಹಾಕುವುದು ತಪ್ಪಾ: ರಾಯರೆಡ್ಡಿ ಪ್ರಶ್ನೆ

ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಹಕ್ಕು ಪ್ರಾಥಮಿಕ ಕಾಳಜಿಯಾಗಿರಬೇಕು. ಜನರ ನಡುವೆ ದ್ವೇಷ ಮತ್ತು ವಿಭಜನೆಯನ್ನು ಹರಡುವ ಯಾವುದೇ ಕ್ರಮವನ್ನು ಕಠಿಣ ಕ್ರಮಗಳೊಂದಿಗೆ ವ್ಯವಹರಿಸಬೇಕು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿಮ್ಮ ಮಧ್ಯಪ್ರವೇಶ ಅವಶ್ಯಕ ಎಂದು ಕೇಂದ್ರ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *