ಬಿಜೆಪಿ, ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸಾಕಷ್ಟು ಶಾಸಕರು ಬರ್ತಾರೆ: ಚಲುವರಾಯಸ್ವಾಮಿ

Public TV
1 Min Read

ಚಾಮರಾಜನಗರ: ಬಿಜೆಪಿ, ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಸಾಕಷ್ಟು ಜನ ಶಾಸಕರು ಬರಲಿದ್ದಾರೆ, ಅವರ ಸೇರ್ಪಡೆಗೆ ಸಮಯ ನಿಗದಿಯಾಗಿಲ್ಲ ರಾಜ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

BJP - CONGRESS

ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ್ವ ಆರಂಭವಾಗಿದೆ, ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದ್ದು ಬೇರೆ ಬೇರೆ ಪಕ್ಷಗಳ ಸಾಕಷ್ಟು ಮಂದಿ ನಾಯಕರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಗಳಲ್ಲಿ ಹಿಜಬ್‌ ವಿವಾದ – ಹೈಕೋರ್ಟ್‌ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ

ಇದೀಗ ಮಂಡ್ಯದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸೋತು ಶಕ್ತಿಯೇ ಇಲ್ಲವಾಗಿದ್ದ ಕಾಂಗ್ರೆಸ್ ಈಗ ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದು ಬದಲಾವಣೆ ಮುನ್ಸೂಚನೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ

Share This Article
Leave a Comment

Leave a Reply

Your email address will not be published. Required fields are marked *