ಕಚ್ಚಾ ಬದಾಮ್ ಎಂದು ಹಾಡಿದ್ದವನ ಆತಂಕವೇನು ಗೊತ್ತಾ?

Public TV
1 Min Read

ಕೋಲ್ಕತ್ತ: ರಾತ್ರೋರಾತ್ರಿ ಸ್ಟಾರ್ ಆಗಿರುವ ಎಷ್ಟೋ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗೆ ಕಡಲೆಕಾಯಿ ಮಾರುತ್ತಾ ಜೀವನ ಸಾಗಿಸುತ್ತಿದ್ದ ಭುಬನ್ ಅವರು ಹಾಡಿದ್ದ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಆದರೆ ಈ ಸ್ಟಾರ್ ಪಟ್ಟ ಭುಬನ್ ಅವರಿಗೆ ಒಂದು ಆತಂಕವನ್ನುಂಟು ಮಾಡಿದೆ.

ನಾನು ಕಲಾವಿದನಾಗಿ ಉಳಿಯಲು ಬಯಸುತ್ತೇನೆ. ನಾನೀಗ ಸೆಲಬ್ರೆಟಿಯಾಗಿದ್ದೇನೆ. ನಾನೊಬ್ಬ ಸೆಲೆಬ್ರಿಟಿಯಾಗಿ ಕಡಲೆಕಾಯಿ ಮಾರಲು ಹೊರಟರೆ ಅವಮಾನ ಎದುರಿಸಬೇಕಾಗುತ್ತದೆ. ನಾನು ಕಡಲೆಕಾಯಿ ಮಾರಾಟ ಮಾಡುವುದಿಲ್ಲ ಎಂದು  ಭುಬನ್ ಅವರು ಆತಂಕವ್ಯಕ್ತ ಪಡಿಸಿದ್ದಾರೆ.

ಹಳೆಯ ಚೈನ್, ಮೊಬೈಲ್‍ಗಳನ್ನು ತೆಗೆದುಕೊಂಡು ಅದಕ್ಕೆ ಪ್ರತಿಯಾಗಿ ಕಡಲೆಕಾಯಿ ನೀಡುತ್ತಿದ್ದರು ಭುಬನ್. ಈ ಹಾಡಿನ ಸಾಹಿತ್ಯ ಕೂಡ ಅದೇ ಅರ್ಥವನ್ನು ನೀಡುತ್ತದೆ. ಅವರಿಗೆ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದಿರುವುದಕ್ಕೆ ಖುಷಿ ಇದೆ. ಇತ್ತೀಚೆಗೆ ಪಶ್ಚಿಮ ಬಂಗಾಳ ಪೊಲೀಸರು ಭುಬನ್ ಅವರನ್ನು ಸನ್ಮಾನಿಸಿದ್ದಾರೆ. ಇವರ ಒಂದು ಹಾಡು ಸೋಶಿಯಲ್ ಮೀಡಿಯಾದಲ್ಲಿ ಕಮಾಲ್ ಮಾಡಿದೆ. ಇದನ್ನೂ ಓದಿ:  ಹರ್ಷನ ಒಂದೊಂದು ರಕ್ತದ ಹನಿಯೂ ವ್ಯರ್ಥವಾಗದಂತೆ ಹಿಂದೂ ರಾಷ್ಟ್ರ ನಿರ್ಮಾಣಕ್ಕೆ ಶಪಥ ಮಾಡ್ತೇವೆ: ಪ್ರಮೋದ್ ಮುತಾಲಿಕ್

ಹಾಡಿನ ಸಾಹಿತ್ಯ ಅರ್ಥವಾಗದಿದ್ದರೂ, ಭುಬನ್ ಹಾಡಿದ ರೀತಿ ಎಲ್ಲರಿಗೂ ಇಷ್ಟವಾಗಿತ್ತು. ಹೀಗಾಗಿ, ಸೋಶಿಯಲ್ ಮೀಡಿಯಾದಲ್ಲಿ ಈ ಹಾಡು ಸಖತ್ ಸೌಂಡ್ ಮಾಡುತ್ತಿದೆ. ಭುಬನ್ ಕರೆಸಿ ಕಚ್ಚಾ ಬಾದಾಮ್.. ಹಾಡನ್ನು ರೆಕಾರ್ಡ್ ಮಾಡಿ, ಸಾಂಗ್ ಒಂದನ್ನು ಬಿಡಲಾಗಿದೆ. ಹೀಗಾಗಿ ಅವರನ್ನು ನೋಡುವ ದೃಷ್ಟಿ ಈಗ ಬದಲಾಗಿದೆ. ಈಗ ಅವರು ಮತ್ತೆ ಕಡಲೆಕಾಯಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *