ಉಕ್ರೇನ್‌ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು

Public TV
1 Min Read

ಕೀವ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಭಾರತದ ಮತ್ತೊಬ್ಬ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿ ಪಂಜಾಬ್‌ ಮೂಲದವನು ಎಂದು ಗುರುತಿಸಲಾಗಿದೆ.

ಪಂಜಾಬ್‌ನ ಬರ್ನಾಲಾ ಮೂಲದ ಚಂದನ್‌ ಜಿಂದಾಲ್‌ (22), ಉಕ್ರೇನ್‌ನಲ್ಲಿ ಮಿದುಳು ಪಾರ್ಶ್ವವಾಯುವಿನಿಂದ (ಬ್ರೈನ್‌ ಸ್ಟ್ರೋಕ್‌) ಮೃತಪಟ್ಟಿದ್ದಾನೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು

ಚಂದನ್‌ ಜಿಂದಲ್‌, ವಿನ್ನಿಟ್ಸಿಯಾ ಉಕ್ರೇನ್‌ನಲ್ಲಿರುವ ಮೆಮೊರಿಯಲ್‌ ಮೆಡಿಕಲ್‌ ಯೂನಿವರ್ಸಿಟಿಯ ವಿನ್ನಿಟ್ಸಿಯಾ ನ್ಯಾಷನಲ್ ಪೈರೋಗೋವ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.

ಫೆಬ್ರವರಿ 2 ರಂದು ಈತ ಅನಾರೋಗ್ಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಮಿದುಳು ಪಾರ್ಶ್ವವಾಯುವಿಗೆ ಒಳಗಾದ ನಂತರ ಜಿಂದಾಲ್ ಅವರನ್ನು ವಿನ್ನಿಟ್ಸಿಯಾ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಹಿಂದಿನ ದಿನ ಅವರು ಕೊನೆಯುಸಿರೆಳೆದಿದ್ದಾರೆ. ಪುತ್ರನ ಪಾರ್ಥಿವ ಶರೀರವನ್ನು ವಾಪಸ್‌ ತರಲು ಕ್ರಮವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮೃತನ ತಂದೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನವೀನ್ ವ್ಯಕ್ತಿತ್ವ ಪ್ರಶಂಸಿಸಿದ ಚಂದನವನದ ಮೋಹಕತಾರೆ

ಈಚೆಗಷ್ಟೇ ಉಕ್ರೇನ್‌ನಲ್ಲಿ ರಷ್ಯಾ ನಡೆಸಿದ ಶೆಲ್‌ ದಾಳಿಗೆ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿ ಬಲಿಯಾಗಿದ್ದಾನೆ. ಆತನ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕೇಂದ್ರ ಸರ್ಕಾರ ಕ್ರಮಕೈಗೊಂಡಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಬೆಳಗಾವಿ 19 ವಿದ್ಯಾರ್ಥಿಗಳು ಸಿಲುಕಿದ್ದು, ಇಬ್ಬರು ವಾಪಸ್ ಆಗಿದ್ದಾರೆ: ಜಿಲ್ಲಾಧಿಕಾರಿ

Share This Article
Leave a Comment

Leave a Reply

Your email address will not be published. Required fields are marked *