ಕಾಂಗ್ರೆಸ್‍ನವರ ಪ್ರಚೋದನೆ ಮಾತುಗಳನ್ನು ಕೇಳ್ಬೇಡಿ, ನಿಮಗೆ ನಿಮ್ಮ ಭವಿಷ್ಯ ಮುಖ್ಯ: ರೇಣುಕಾಚಾರ್ಯ

Public TV
1 Min Read

ಬೆಂಗಳೂರು: ವಿದ್ಯಾರ್ಥಿಗಳು ಕಾಂಗ್ರೆಸ್ ಮುಖಂಡರ ಪ್ರಚೋದನೆ ಮಾತುಗಳನ್ನು ಕೇಳಬೇಡಿ. ನಿಮಗೆ ನಿಮ್ಮ ಭವಿಷ್ಯ ಮುಖ್ಯ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದರು.

ಹಿಜಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವೆಲ್ಲರೂ ಒಂದು ಕುಂಟುಂಬ ಸದಸ್ಯರಂತೆ ಈ ದೇಶದಲ್ಲಿ ವಾಸ ಮಾಡಬೇಕಾಗುತ್ತದೆ. ಕೆಲವೊಂದು ಕಡೆಗೆ ವಿದ್ಯಾರ್ಥಿಗಳು ನಮಗೆ ಹಿಜಬ್ ಮುಖ್ಯ ಶಿಕ್ಷಣ ಬೇಡ ಅಂತ ಪಟ್ಟು ಹಿಡಿದು ಕುಳಿತಿರುವ ವಿಚಾರವಾಗಿ ಅವರು ಮಾತನಾಡಿ, ಅವರಿಗೆ ನಾನು ವಿನಂತಿ ಮಾಡುತ್ತೇನೆ. ಅವರು ಕೂಡಾ ನಮ್ಮ ಮಕ್ಕಳು ಇದ್ದಹಾಗೆ. ಆ ಮುಗ್ಧ ಮನಸ್ಸಿನ ವಿದ್ಯಾರ್ಥಿನಿಯರ ಮೇಲೆ ಈ ಕೆಲ ಸಂಘಟನೆಗಳು ಕಾಂಗ್ರೆಸಿನ ಮುಖಂಡರು ಪ್ರಚೋದನೆ ಮಾಡುತ್ತಿದ್ದಾರೆ. ಅವರು ಎಲ್ಲಿ ಓದಿ ವಿದ್ಯಾವಂತರಾದರೆ ಅವರು ಎಲ್ಲಿ ಶಿಕ್ಷಣ ಪಡೆದು ಈ ದೇಶದ ಸತ್ತಪ್ರಜೆಗಳಾಗುತ್ತಾರೆ. ಶಿಕ್ಷಣದಿಂದ ವಂಚಿತರಾದರೆ ಅವರ ಮನಸ್ಸು ವಿಕೃತವಾಗುತ್ತೆ. ಎಲ್ಲಿಯೋ ಒಂದು ಕಡೆ ಇದು ಭಯೋತ್ಪಾದನೆಗೆ ಕುಮ್ಮಕ್ಕು ಆಗುತ್ತೆ ಎಂದರು. ಇದನ್ನೂ ಓದಿ: ಮಂಗಳವಾರ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

ನಾನು ಒಂದು ವಿನಂತಿ ಮಾಡುತ್ತೇನೆ ಯಾವುದೇ ಸಂಘಟನೆ ಅಥವಾ ಕಾಂಗ್ರೆಸ್ ಮುಖಂಡರ ಪ್ರಚೋದನೆಯ ಮಾತುಗಳನ್ನು ಕೇಳಬೇಡಿರಿ. ನಿಮಗೆ ನಿಮ್ಮ ಭವಿಷ್ಯ ಮುಖ್ಯ. ಈ ದೇಶದ ಕಾನೂನನ್ನು ನಾವು ಗೌರವಿಸಬೇಕು. ಈ ನೆಲದ ಕಾನೂನ ಅನ್ನು ಗೌರವಿಸಬೇಕು. ತಾವು ಕೂಡಾ ಗೌರವಿಸುವಂತೆ ಶಾಸಕರು ವಿನಂತಿಸಿಕೊಂಡರು. ಇದನ್ನೂ ಓದಿ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಅಶ್ವತ್ಥನಾರಾಯಣ

Share This Article
Leave a Comment

Leave a Reply

Your email address will not be published. Required fields are marked *