ಚೆನ್ನೈ: ರೈಲ್ವೆ ಹಳಿಯ ಬಳಿ ವೀಡಿಯೋ ಶೂಟ್ ಮಾಡುತ್ತಿದ್ದ ಮೂವರ ಮೇಲೆ ವೇಗವಾಗಿ ಬರುತ್ತಿದ್ದ ರೈಲು ಹರಿದು, ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ.
ಮೃತರನ್ನು ಕೆ.ಮೋಹನ್(17), ಪ್ರಕಾಶ್ (17) ಹಾಗೂ ಎಸ್.ಅಶೋಕ್(24) ಎಂದು ಗುರುತಿಸಲಾಗಿದೆ. ಚೆಂಗಲಪಟ್ಟು ಸಮೀಪದ ರೈಲ್ವೆ ಹಳಿ ಬಳಿ ವೀಡಿಯೋ ಶೂಟ್ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಸ್ಥಳೀಯ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಸ್ಥಳ ಪರಿಶೀಲನೆ ನಡೆಸಿದ ಚೆಂಗಾಲಪಟ್ಟು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಜಾಮೀನು ಮಂಜೂರಾಗಿದ್ದರೂ ಕಾರಾಗೃಹದಲ್ಲಿ ಕೈದಿ ನೇಣಿಗೆ ಶರಣು
ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಅವರು, ಈ ಮೂವರು ಸ್ನೇಹಿತರಾಗಿದ್ದು, ಚೆಂಗಲಪಟ್ಟು ಬಳಿಯ ಸಿಂಗಪೆರುಮಾಳ್ ಕೋಯಿಲ್ ಬಳಿಯ ಚೆಟ್ಟಿಪುನಯಂ ಪ್ರದೇಶಕ್ಕೆ ಸೇರಿದವರು. ಪ್ರತಿದಿನವೂ ಈ ಮೂವರು ರೈಲ್ವೇ ನಿಲ್ದಾಣದಲ್ಲಿ ಇಂತಹ ವೀಡಿಯೋಗಳನ್ನು ಚಿತ್ರೀಕರಿಸಿ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎಂದಿದ್ದಾರೆ. ಇದನ್ನೂ ಓದಿ: 2 ಕೋಟಿ ದರೋಡೆ ಕೇಸ್ – ಪತ್ನಿ ಸಾಲ ತೀರಿಸಲು ಕನ್ನ ಹಾಕಿದ ಇಬ್ಬರು ಪತ್ನಿಯರ ಮುದ್ದಿನ ಗಂಡ
ಚೆಂಗಲಪಟ್ಟು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತಕ್ಕೂ ಮುನ್ನ ಮೂವರು ರೈಲ್ವೆ ಹಳಿ ಬಳಿ ನಿಂತು ಶೂಟ್ ಮಾಡಿದ ಕೆಲವು ವೀಡಿಯೋಗಳನ್ನು ಅಪ್ಲೋಡ್ ಮಾಡಿದ್ದಾರೆ ಎಂದು ವರದಿಯಾಗಿದೆ. ಚೆಂಗಲಪಟ್ಟು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು.

 
			
 
		 
		 
                                
                              
		