ಗಂಗಾವತಿ ಕಾಂಗ್ರೆಸ್ ಟಿಕೆಟ್ ಹಿಂದೂ ಅಭ್ಯರ್ಥಿಗೆ ನೀಡಿ – ಸ್ವಪಕ್ಷೀಯರಿಂದ್ಲೇ ಇಕ್ಬಾಲ್ ಅನ್ಸಾರಿಗೆ ಟಕ್ಕರ್

Public TV
1 Min Read

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ನೀಡಬೇಡಿ. ಆಂಜನೇಯನ ಜನ್ಮ ಸ್ಥಳದಲ್ಲಿ ಹಿಂದೂ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೆ ಸೋಲು ಖಚಿತ!. ಹೀಗೆ ಹೇಳಿದ್ದು ಬಿಜೆಪಿ ಮುಖಂಡರಲ್ಲ. ಸ್ವತಃ ಕಾಂಗ್ರೆಸ್ ಮುಖಂಡರೇ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮುಂದೆ ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.

ವರಿಷ್ಠರ ಭೇಟಿಯಾಗಿ ಗಂಗಾವತಿ ಕಾಂಗ್ರೆಸ್ ಮುಖಂಡರು ಮಾತನಾಡಿದ್ದು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಕಾಂಗ್ರೆಸ್ ಟಿಕೆಟ್ ನೀಡದಂತೆ ಮನವಿ ಮಾಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಮುಂದೆ ಕಾಂಗ್ರೆಸ್ ಮುಖಂಡರು ಅಳಲು ತೋಡಿಕೊಂಡ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಕಾಂಗ್ರೆಸ್ ಟಿಕೆಟ್ ಪಡೆದು ಕಣಕ್ಕಿಳಿಯುವ ನಿರೀಕ್ಷೆಯಲ್ಲಿರೋ ಇಕ್ಬಾಲ್ ಅನ್ಸಾರಿಗೆ ಶಾಕ್ ನೀಡಿದ್ದಾರೆ. ಇದರಿಂದ ಕೊಪ್ಪಳ ಕಾಂಗ್ರೆಸ್ ನಲ್ಲಿ ಮನೆಯೊಂದು ಮೂರು ಬಾಗಿಲು ಸ್ಥಿತಿ ನಿರ್ಮಾಣ ಆಗಿದೆ.

ಅಂಜನಾದ್ರಿಯನ್ನ ಅಯೋಧ್ಯೆಯಂತೆ ನಿರ್ಮಾಣ ಮಾಡಲಾಗ್ತಿದೆ. ಅಯೋಧ್ಯೆಯಂತೆ ಅಂಜನಾದ್ರಿಯಲ್ಲೂ ಹಿಂದೂ ಎಂಎಲ್‍ಗೆ ಮಾಡುವ ವ್ಯವಸ್ಥೆ ನಡೆದಿದೆ. ಇಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟರೆ ಗೆಲ್ಲುವ ಪರಿಸ್ಥಿತಿ ಇಲ್ಲ ಎಂದು ಬಿ.ಕೆ.ಹರಿಪ್ರಸಾದ್ ಗೆ ಕಾಂಗ್ರೆಸ್ ಮುಖಂಡರು ಮನವರಿಕೆ ಮಾಡಿದ್ದಾರೆ. ಈ ವೇಳೆ ಹರಿಪ್ರಸಾದ್, ನಾನು ಕಾಂಗ್ರೆಸ್ ನಲ್ಲೇ ಹಿಂದೂ- ಮುಸ್ಲಿಂ ಎಂಬುದನ್ನು ಒಪ್ಪುವುದಿಲ್ಲ ಎಂದಿದ್ದಾರೆ. ಆಗ ಹರಿಪ್ರಸಾದ್ ಮುಂದೆ ಮತ್ತೆ ನೋವು ತೋಡಿಕೊಂಡು, ನಮ್ಮನ್ನು ಸಿದ್ದರಾಮಯ್ಯ ಕೂಡ ಟಾರ್ಗೆಟ್ ಮಾಡಿದ್ರು. ಇಕ್ಬಾಲ್ ಅನ್ಸಾರಿ ಎಚ್.ಜಿ. ರಾಮುಲುರನ್ನು ಕಡೆಗಣಿಸಿದ್ರು ಎಂದು ದೂರಿದ್ದಾರೆ.

ಕಾಂಗ್ರೆಸ್ ಮುಖಂಡ ವೀರಭದ್ರಪ್ಪ ನಾಯಕ, ಮಾಜಿ ಎಂಎಲ್ಸಿ ಕರಿಯಣ್ಣ ಸಂಗಟಿ ಅವರು ದೂರಿದ್ದು, ಎಚ್.ಆರ್.ಶ್ರೀನಾಥ್ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಕೆಲ ಮುಸ್ಲಿಂ ಮುಖಂಡರು ಎಚ್.ಆರ್. ಶ್ರೀನಾಥ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ

Share This Article
Leave a Comment

Leave a Reply

Your email address will not be published. Required fields are marked *