ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲು

Public TV
1 Min Read

ಹುಬ್ಬಳ್ಳಿ: ಶನಿವಾರ ರಾತ್ರಿ ನಡೆದ ಹುಬ್ಬಳ್ಳಿ ಗಲಭೆಯಲ್ಲಿ ಕಾಣಿಸಿಕೊಂಡಿದ್ದ ಮೌಲ್ವಿಯ ಅಸಲಿ ರೂಪ ಬಯಲಾಗಿದೆ. ಈ ಎಕ್ಸ್‌ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದ್ದು, ಆತ ಮೌಲ್ವಿಯೇ ಅಲ್ಲ. ಮೌಲ್ವಿಯ ವೇಷ ಧರಿಸಿ ಬಂದಿದ್ದ ಲಾರಿಚಾಲಕ ಎಂಬುದು ಗೊತ್ತಾಗಿದೆ.

HUBBALLI_ ACCUSED_SHIFT

ಹುಬ್ಬಳ್ಳಿ ಗಲಾಟೆಯಲ್ಲಿ ಮೌಲ್ವಿ ವೇಷದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಅಸಲಿಗೆ ಮೌಲ್ವಿಯೇ ಅಲ್ಲ. ಆತ ಲಾರಿ ಚಾಲಕ ವಾಸಿಂ. ಈ ಹಿಂದೆ ಲಾರಿ ಚಾಲಕನಾಗಿದ್ದ ಈತ ಮೌಲ್ವಿಯಂತೆ ವೇಷ ಹಾಕಿಕೊಂಡು ಓಡಾಡುತ್ತಿದ್ದ. ಈ ವೇಷ ಹಾಕಿ ತನ್ನದೇ ಆದ ಅಭಿಮಾನಿಗಳನ್ನು ಬೆಳೆಸಿಕೊಂಡಿದ್ದ ಎಂಬ ರಹಸ್ಯ ಬಯಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಹಿಂದೆ ವ್ಯವಸ್ಥಿತ ಪಿತೂರಿ- ಶಿರಚ್ಛೇದದ ಮಾತು, RSS ವಿರುದ್ಧ ಘೋಷಣೆ

ALTHAF HALLURA 3

ಹುಬ್ಬಳ್ಳಿಯಲ್ಲಿನ ಗಲಭೆಯ ಹಿಂದೆ ಮೌಲ್ವಿಯೊಬ್ಬರ ಕೈವಾಡ ಇರುವ ಶಂಕೆ ವ್ಯಕ್ತವಾಗಿತ್ತು. ಗಲಾಟೆಗೂ ಮುನ್ನ ಮೌಲ್ವಿಯೊಬ್ಬರು ಕಮಿಷನರ್ ಅವರ ಇನ್ನೋವಾ ಕಾರಿನ ಮೇಲೆ ಹತ್ತಿ ಭಾಷಣ ಮಾಡಿರುವ ವೀಡಿಯೋ ವೈರಲ್ ಆಗಿತ್ತು. ಅಲ್ಲದೆ, ಇದು ಗಲಭೆಗೆ ಪ್ರಚೋದನೆ ನೀಡಿರುವ ಭಾಷಣ ಎಂದು ಹೇಳಲಾಗಿತ್ತು. ಪೊಲೀಸ್ ಠಾಣೆ ಅನ್ನೋದನ್ನೂ ನೋಡದೇ ಪ್ರಚೋದನೆ ಕೊಟ್ಟಿದ್ದೇ ಇಷ್ಟು ದೊಡ್ಡ ಗಲಾಟೆಗೆ ಕಾರಣ ಎಂದು ಪೊಲೀಸರು ಹೇಳಿದ್ದರು. ಹುಬ್ಬಳ್ಳಿಯ ದರ್ಗಾವೊಂದರ ಮೌಲ್ವಿ ಎಂಬ ಮಾಹಿತಿ ಸಿಕ್ಕಿತ್ತು. ಈಗ ಈತನ ಬಗ್ಗೆ ತನಿಖೆ ನಡೆಸುತ್ತಿದ್ದಾಗ ವಾಸೀಂ ಮೌಲ್ವಿಯೇ ಅಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *