ಸುಮಲತಾರನ್ನ ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ: ಸಿ.ಪಿ ಯೋಗೇಶ್ವರ್

Public TV
1 Min Read

ರಾಮನಗರ: ಮಂಡ್ಯ ಸಂಸದೆ ಸುಮಲತಾರನ್ನ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಮ್ಮ ಪಕ್ಷ ಅವರಿಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ಮಾಡಿದ್ದೇವೆ. ಮದುವೆ ಸಮಾರಂಭದಲ್ಲಿ ಅವರನ್ನ ಭೇಟಿ ಮಾಡಿದ್ದೆವು, ಸಿಎಂ ಸಹ ಇದ್ದರು. ಅವರು ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡೋಣ ಎಂದರು. ಇದನ್ನೂ ಓದಿ: ನಾನು ಬಿಜೆಪಿ ಸೇರುವ ಬಗ್ಗೆ ಎಲ್ಲೂ ಹೇಳಿಲ್ಲ: ಸುಮಲತಾ ಅಂಬರೀಶ್‌

ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಬಿಜೆಪಿಯಿಂದ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಮಲತಾ ಇನ್ನೂ ಪಕ್ಷಕ್ಕೆ ಬಂದಿಲ್ಲ. ಹೀಗಾಗಿ ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ. ಮಂಡ್ಯದ ಮಾಜಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ ಅವರನ್ನು ಸಹ ಆಹ್ವಾನ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಾಗಿ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಮುಂದಿನ ತಿಂಗಳಿನಿಂದ ಈ ಕಾರ್ಯಕ್ರಮ ಪ್ರಾರಂಭ ಆಗಲಿದೆ. ನಾನು ಆಪರೇಷನ್ ಎಕ್ಸ್‍ಪರ್ಟ್ ಅಲ್ಲ, ಆದರೆ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಈ ಭಾಗದ ಮುಖಂಡನಾಗಿದ್ದೇನೆ, ಹಾಗಾಗಿ ನನಗೆ ಜವಾಬ್ದಾರಿ ಇದೆ. ಸಚಿವ ಸ್ಥಾನದ ಬಗ್ಗೆ ಗೊತ್ತಿಲ್ಲ, ಸಿಎಂಗೆ ಕೇಳಿ ಎಂದು ಸಿ.ಪಿ.ಯೋಗೇಶ್ವರ್ ಹೇಳಿದರು. ಇದನ್ನೂ ಓದಿ: ಟ್ವಿಟ್ಟರ್‌ ಆಯ್ತು ಈಗ ಕೋಕಾ ಕೋಲಾ ಖರೀದಿಸುತ್ತೇನೆಂದ ಎಲಾನ್‌ ಮಸ್ಕ್

Share This Article
Leave a Comment

Leave a Reply

Your email address will not be published. Required fields are marked *