ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಸಂಪೂರ್ಣ ವಿಫಲ: ಧ್ರುವನಾರಾಯಣ್

Public TV
1 Min Read

ಶಿವಮೊಗ್ಗ: ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಭ್ರಷ್ಟಾಚಾರ ನಿಯಂತ್ರಣ ಮಾಡಲು ಪ್ರಯತ್ನ ಮಾಡಲಿಲ್ಲ. ಮುಖ್ಯಮಂತ್ರಿ ಆದ ನಂತರ ಪರಿಣಾಮಕಾರಿಯಾಗಿ ಕೆಲಸ ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ; ಹಣ ಇದ್ದವರು ಮಾತ್ರ ಸಿಎಂ ಆಗ್ತಾರೆ ಅನ್ನೋದು ಇತಿಹಾಸದಲ್ಲೇ ಇಲ್ಲ – ಯತ್ನಾಳ್‍ಗೆ ಶ್ರೀರಾಮುಲು ತಿರುಗೇಟು

ಇದೇ ವೇಳೆ ಬಸವರಾಜ್ ಬೊಮ್ಮಾಯಿ ಅವರ ತಂದೆ ಎಸ್.ಆರ್.ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದರು. ಈ ಹಿಂದೆ ಬಸವರಾಜ್ ಬೊಮ್ಮಾಯಿ ಅವರು ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದರು. ಆದರೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ; ವಿಜಯಪುರ ಹೆಚ್ಚು ಕಡಿಮೆ ಪಾಕಿಸ್ತಾನ ಇದ್ದಂಗೆ ಇದೆ: ಯತ್ನಾಳ್‌

Share This Article
Leave a Comment

Leave a Reply

Your email address will not be published. Required fields are marked *