ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ NSUI ದಾಳಿ

Public TV
1 Min Read

ತುಮಕೂರು: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆ ಮೇಲೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ದಾಳಿ ನಡೆಸಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಇದನ್ನು ಖಂಡಿಸಿದ್ದಾರೆ.

ಇಂದು ತುಮಕೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವರು, ಬಿ.ಸಿನಾಗೇಶ್ ಮನೆ ಮೇಲೆ ಎನ್‍ಎಸ್‍ಯುಐಯವರು ದಾಂಧಲೆ ಮಾಡಿದ್ದಾರೆ. ಮನೆ ಬಳಿ ಬೆಂಕಿ ಹಚ್ಚುವ ಕೆಲಸ ಕೂಡ ಮಾಡಿದ್ದಾರೆ. ಇದು ಎನ್‍ಎಸ್‍ಯುಐ ಗೂಂಡಾ ವರ್ತನೆ. ಅದಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಕಿಡಿಕಾರಿದರು. ಇದನ್ನೂ ಓದಿ: ದೇಶದ ಒಳಿತಿಗಾಗಿ ಪ್ರಧಾನಿ ಸ್ಥಾನವನ್ನು ತ್ಯಾಗ ಮಾಡಿದವರಿಗೆ ಕೊಡುವ ಬೆಲೆ ಇದೆಯೇ?: ಕೇಂದ್ರ ಸರ್ಕಾರಕ್ಕೆ ಡಿಕೆಶಿ ಪ್ರಶ್ನೆ

ಇಂತಹ ವರ್ತನೆ ಇನ್ನು ಮುಂದೆ ನಡೆಯಬಾರದು. ಬೆಂಗಳೂರಿನಿಂದ 5 ಜನ, ಭದ್ರಾವತಿಯಿಂದ ಒಬ್ಬ, ಚಿಕ್ಜಮಕಗಳೂರು, ದಾವಣಗೆರೆಯಿಂದ ತಲಾ ಇಬ್ಬರು ಬಂದಿದ್ದಾರೆ. ಈ ಮೂಲಕ ಇದು ಪೂರ್ವ ನಿಯೋಜಿತ ಕೃತ್ಯ. ಘಟನೆಗೆ ಸಂಬಂಧಿಸಿದಂತೆ ಒಟ್ಟು 15 ಜನರನ್ನು ಬಂಧಿಸಲಾಗಿದೆ ಎಂದು ಸಚಿವರು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *