ತಲ್ವಾರ್‌ನಲ್ಲಿ ಕೇಕ್ ಕಟ್ – ಮೂವರ ಬಂಧನ

Public TV
1 Min Read

ಉಡುಪಿ: ಹುಟ್ಟುಹಬ್ಬಕ್ಕೆ ತಲ್ವಾರ್‌ನಲ್ಲಿ ಕೇಕ್ ಕಟ್ ಮಾಡಿದ ಹಿನ್ನೆಲೆ ಮೂವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ತಲವಾರಿನಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ ಹಿನ್ನೆಲೆ ಏಳು ಮಂದಿ ಯುವಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆ  ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ಜೀತೇಂದ್ರ ಶೆಟ್ಟಿ, ಗಣೇಶ್ ಪೂಜಾರಿ ಮತ್ತು ಶರತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆದರೆ ತಲವಾರ್ ಹಿಡಿದ ನಿರಂಜನ್ ಶೆಟ್ಟಿಗಾರ್ ಪರಾರಿಯಾಗಿದ್ದಾನೆ. ಪ್ರಸ್ತುತ ಪೊಲೀಸರು ತನುಜ್, ಸೂರಜ್ ಹಾಗೂ ಅನಿಶ್ ಬಂಧನಕ್ಕೆ ಬಲೆಬೀಸಿದ್ದಾರೆ. ಇದನ್ನೂ ಓದಿ: ದೇವಸ್ಥಾನದಲ್ಲಿ ಮದುವೆಯಾಗಲು ಬಿಡಲ್ಲ – ಗುಜರಾತ್ ಯುವತಿ ವಿರುದ್ಧ ಸಿಡಿದ ಬಿಜೆಪಿ ನಾಯಕಿ 

ಕಳೆದ ಮೇ ತಿಂಗಳ 30 ರಂದು ಪಡುಬಿದ್ರಿಯ ಜೀತೇಂದ್ರ ಶೆಟ್ಟಿ ಮನೆಯಲ್ಲಿ ಬರ್ತಡೇ ಆಚರಿಸಲಾಗಿತ್ತು. ಈ ವೀಡಿಯೋ ತುಣುಕನ್ನು ಯುವಕರೇ ಸೋಶಿಯಲ್ ಮೀಡಿಯಾದಲ್ಲಿ ಹರಿಯ ಬಿಟ್ಟಿದ್ದರು. ವೀಡಿಯೋ ವೈರಲ್ ಆಗುತ್ತಿದ್ದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಉಡುಪಿ ಎಸ್‍ಪಿ ವಿಷ್ಣುವರ್ಧನ್ ಅವರಿಗೆ ಉನ್ನತ ಅಧಿಕಾರಿಗಳು ಸೂಚಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *