ಬಿಹಾರದ ಕಿಶನ್ ಗಂಜ್‍ನಲ್ಲಿ ಕಾಫಿನಾಡ ಯೋಧನ ಮೃತದೇಹ ಪತ್ತೆ

Public TV
2 Min Read

ಚಿಕ್ಕಮಗಳೂರು: ರಜೆಗೆ ಮನೆಗೆ ಬಂದಿದ್ದ ತಾಲೂಕಿನ ಖಾಂಡ್ಯ ಸಮೀಪದ ಮಸಿಗದ್ದೆ ಗ್ರಾಮದ ಯೋಧ ಗಣೇಶ್ ಮೃತದೇಹ ಬಿಹಾರದ ಕಿಶನ್ ಗಂಜ್‍ನಲ್ಲಿ ಪತ್ತೆಯಾಗಿದೆ.

ಮೃತ ಯೋಧ ಗಣೇಶ್ 15 ದಿನದ ಹಿಂದೆ ರಜೆ ಹಾಕಿ ಊರಿಗೆ ಬಂದಿದ್ದರು. 12ನೇ ತಾರೀಖು ಸೇನಾ ತಂಡ ಕೂಡಿಕೊಳ್ಳಬೇಕಾದ ಕಾರಣ ಜೂನ್ 9ರಂದು ಮನೆಯಿಂದ ವಾಪಸ್ ಹೋಗಿದ್ದರು. ಇಂದು ಸೇನಾ ತಂಡ ಕೂಡಿಕೊಳ್ಳಬೇಕಿತ್ತು. ಆದರೆ ಸೇನೆಗೆ ಹೋಗುವ ಮುನ್ನವೇ ಬಿಹಾರದ ಕಿಶನ್‍ಗಂಜ್‍ನಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: 2 ವಾರದಿಂದ ಸಿಕ್ಕಿಲ್ಲ ಸೈನಿಕರು – ಮುಂದುವರಿದ ಶೋಧಕಾರ್ಯ

ನಿನ್ನೆ ಬೆಳಗ್ಗೆ ಅವರ ಪತ್ನಿ ಗಣೇಶ್ ಜೊತೆ ಮಾತನಾಡಿದ್ದರು. ಆಗ ಅವರು ಮುಖ ತೊಳೆಯುತ್ತಿದ್ದೇನೆ ಎಂದು ಹೇಳಿದ್ದರು. ಆದರೆ ಮಧ್ಯಾಹ್ನದ ನಂತರ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮತ್ತೆ ಕರೆ ಮಾಡಿಲ್ಲ. ಆದರೆ ನಿನ್ನೆ ರಾತ್ರಿ ಸೇನೆ ಅಧಿಕಾರಿಗಳು ಕರೆ ಮಾಡಿ ಗಣೇಶ್ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಿಹಾರದ ಕಿಶನ್ ಗಂಜ್‍ನಲ್ಲಿ ಅವರ ಮೃತದೇಹ ಕಂಡ ಅಂಬುಲೆನ್ಸ್ ಚಾಲಕ ಜೇಬಿನಲ್ಲಿದ್ದ ಐಡಿ ಕಾರ್ಡ್ ಹಾಗೂ ಆರ್ಮಿಯ ಪಾಸ್‍ ನೋಡಿ ಈತ ಯೋಧ ಎಂದು ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸೇನೆಗೆ ವಾಪಸ್ ಹೋಗೇ ಇಲ್ಲ. ಅವರು ಹೇಗೆ ಸಾವನ್ನಪ್ಪಿದರು ಎಂಬುದು ಕುಟುಂಬಸ್ಥರು ಹಾಗೂ ಸ್ಥಳಿಯರಲ್ಲಿ ಯಕ್ಷಪ್ರಶ್ನೆಯಾಗಿದೆ. ತಾಲೂಕಿನ ಮಸಿಗದ್ದೆ ಗ್ರಾಮದ ನಾಗಯ್ಯ-ಗಂಗಮ್ಮ ದಂಪತಿಯ ಪುತ್ರನಾದ ಗಣೇಶ್ ಕಳೆದ 14 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧ ಗಣೇಶ್ ಪ್ರಸ್ತುತ ಜಮ್ಮುವಿನಲ್ಲಿ ಸಿಗ್ನಲ್ ರೆಜಿಮೆಂಟ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗಣೇಶ್‌ಗೆ ಐದು ವರ್ಷದ ಹೆಣ್ಣು ಮಗಳಿದ್ದಾಳೆ. ಇದನ್ನೂ ಓದಿ: ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್

ಕಳೆದ ಮೂರು ವರ್ಷಗಳ ಹಿಂದೆ ನಾಗಯ್ಯ-ಗಂಗಮ್ಮ ದಂಪತಿಯ ಇನ್ನೊಬ್ಬ ಮಗ ಹಾಗೂ ಯೋಧ ಗಣೇಶ್ ಸಹೋದರ ಕೂಡ ತೀರಿಕೊಂಡಿದ್ದರು. ಇದೀಗ ಯೋಧ ಗಣೇಶ್ ಕೂಡ ಸಾವನ್ನಪ್ಪಿದ್ದಾರೆ. ಇದರಿಂದ ಕುಟುಂಬಕ್ಕೆ ಆಧಾರವೇ ಇಲ್ಲದಂತಾಗಿದೆ. ಯೋಧನ ಸಾವಿನಿಂದ ಕುಟುಂಬ ಹಾಗೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತ ಯೋಧ ಗಣೇಶ್ ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *