ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು

By
1 Min Read

ಡಿಸ್ಪುರ್: ಅಸ್ಸಾಂ ಮತ್ತು ಮೇಘಾಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಹದಗಟ್ಟಿದ್ದು, 31 ಜನರು ಮೃತಪಟ್ಟಿದ್ದಾರೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 2 ರಾಜ್ಯಗಳಲ್ಲೂ ಅನೇಕ ಕಡೆ ಭೂಕುಸಿತ ಸಂಭವಿಸಿದೆ. ಅಷ್ಟೇ ಅಲ್ಲದೇ ಪ್ರಮುಖ ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಆಗಿದೆ.

ಅಸ್ಸಾಂನ 28 ಜಿಲ್ಲೆಗಳಲ್ಲಿ ಕನಿಷ್ಠ 19 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿದ್ದಾರೆ. ಅಷ್ಟೇ ಅಲ್ಲದೇ ಹೊಸದಾಗಿ ರೂಪುಗೊಂಡ ಬಜಾಲಿ ಜಿಲ್ಲೆ ಹೆಚ್ಚು ಹಾನಿಗೊಳಗಾಗಿದೆ. ಬ್ರಹ್ಮಪುತ್ರ ಮತ್ತು ಗೌರಂಗಾ ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಮಟ್ಟಕ್ಕೂ ಮೀರಿ ಹರಿಯುತ್ತಿದೆ.

ಕಳೆದ 3 ದಿನಗಳಿಂದ ಕೇವಲ ಅಸ್ಸಾಂ ರಾಜ್ಯದಲ್ಲೇ 17 ಜನರು ಮೃತಪಟ್ಟಿದ್ದು, 19 ಲಕ್ಷಕ್ಕೂ ಅಧಿಕ ಜನರು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: 2023ರ ಚುನಾವಣೆಗೆ ಬಿಜೆಪಿ ಸಜ್ಜು- ಕೋಟೆನಾಡಿಗೆ ಇಂದು ಜೆ.ಪಿ. ನಡ್ಡಾ ಭೇಟಿ

ಮಳೆಯಿಂದಾಗಿ ಜಲಾವೃತಗೊಂಡಿರುವುದರಿಂದ ರಾಜಧಾನಿ ಗುವಾಹಟಿಯ ಬಹುತೇಕ ಭಾಗಗಳು ಸ್ಥಗಿತಗೊಂಡಿವೆ. ಗುವಾಹಟಿ ನಗರದಲ್ಲಿ ಹಲವೆಡೆ ಭೂಕುಸಿತಗಳು ವರದಿಯಾಗಿದ್ದು, ನೂನ್ಮತಿ ಪ್ರದೇಶದ ಅಜಂತನಗರದಲ್ಲಿ ಮೂವರು ಗಾಯಗೊಂಡಿದ್ದಾರೆ.   ಇದನ್ನೂ ಓದಿ: ಉಗ್ರರಿಂದ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಹತ್ಯೆ

Live Tv

Share This Article
Leave a Comment

Leave a Reply

Your email address will not be published. Required fields are marked *