ವ್ಯಕ್ತಿ ಪೂಜೆ ಬೇಡ, ಪಕ್ಷ ಪೂಜೆ ಮಾಡಿ- ಸಿದ್ದು ಆಪ್ತರಿಗೆ ಕಾಂಗ್ರೆಸ್ ಹೈಕಮಾಂಡ್ ವಾರ್ನಿಂಗ್

By
1 Min Read

ಬೆಂಗಳೂರು: ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಭರ್ಜರಿಯಾಗಿ ಸಿದ್ದರಾಮೋತ್ಸವ ನಡೆಸಲು ಮುಂದಾದ ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.

ಕಾಂಗ್ರೆಸ್ ನಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲಾ ಏನಿದ್ದರು ಪಕ್ಷದ ಪೂಜೆ ಆದ್ದರಿಂದ ಸಿದ್ದರಾಮೋತ್ಸವದಲ್ಲಿ ಪಕ್ಷದ ಸಹಭಾಗಿತ್ವ ಇರಬೇಕು ಎಂದು ಹೈಕಮಾಂಡ್ ಖಡಕ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ 75 ವರ್ಷಾಚರಣೆ ಮಾಡಲಾಗುತ್ತಿದೆ ಮಾಡಲಿ ಇದೇ ಮೊದಲು ಇದೇ ಕೊನೆ ಇನ್ನು ಮುಂದೆ ವ್ಯಕ್ತಿ ಆಧಾರಿತ ಕಾರ್ಯಕ್ರಮ ಇರಬಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಇಂದಿನಿಂದ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂ. ಇಳಿಕೆ

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಸಹಭಾಗಿತ್ವ ಇರಬೇಕು ಎಲ್ಲಕ್ಕಿಂತ ಪ್ರಮುಖವಾಗಿ ಈ ಸಮಾವೇಶದಿಂದ ಪಕ್ಷಕ್ಕೆ ಏನು ಲಾಭವಾಗಲಿದೆ ಎಂಬುದನ್ನ ಪಕ್ಷ ಗಮನಿಸಲಿದೆ ಎಂದು ವೇಣುಗೋಪಾಲ್ ಸ್ಪಷ್ಟವಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಹೈಕಮಾಂಡ್ ನಾಯಕರ ಈ ಮಾತು ಸಿದ್ದರಾಮಯ್ಯಗೆ ಇರುಸು ಮುರುಸು ಉಂಟು ಮಾಡಿದೆ ಎನ್ನಲಾಗುತ್ತಿದೆ. ಅಲ್ಲದೆ ಸಿದ್ದರಾಮೋತ್ಸವದ ಭರ್ಜರಿ ಸಿದ್ದತೆಯಲ್ಲಿದ್ದ ಸಿದ್ದರಾಮಯ್ಯ ಬೆಂಬಲಿಗರಿಗೂ ಹೈಕಮಾಂಡ್ ಈ ಸೂಚನೆ ನಿರಾಸೆ ಉಂಟು ಮಾಡಿದೆ ಎನ್ನಲಾಗುತ್ತಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *