ಚಲಿಸುತಿದ್ದ ಕಾರಿನಲ್ಲೇ ಹೃದಯಾಘಾತ – ಸ್ಥಳದಲ್ಲೇ ಸಾವನ್ನಪ್ಪಿದ ಇಂಜಿನಿಯರ್

Public TV
1 Min Read

ಧಾರವಾಡ: ಚಲಿಸುತಿದ್ದ ಕಾರಿನಲ್ಲೇ ಇಂಜಿನಿಯರ್‌ಗೆ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಲೋಕನಾಥ್ ಗುತ್ತಲ್ (29) ಮೃತ ಇಂಜಿನಿಯರ್. ಧಾರವಾಡ ಜಿಲ್ಲಾ ಪಂಚಾಯತ್‍ನ ಇಂಜಿನಿಯರ್ ಆಗಿದ್ದ ಲೋಕನಾಥ್, ಕರ್ತವ್ಯದ ಮೇಲೆ ಹುಬ್ಬಳ್ಳಿಯಿಂದ ನವಲಗುಂದಗೆ ಹೊರಟಿದ್ದರು. ಈ ವೇಳೆ ನವಲಗುಂದ ತಾಲೂಕಿನ ಕರ್ಲವಾಡ ಗ್ರಾಮದ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿದೆ. ಇದನ್ನೂ ಓದಿ: ಹಿಂದೂ ಬಾಲಕಿಯ ಹೃದಯ ಮುಸ್ಲಿಂ ಯುವಕನಿಗೆ ಕಸಿ

ಪರಿಣಾಮ ಕಾರ್ ರಸ್ತೆ ಪಕ್ಕ ಹೊಲಕ್ಕೆ ನುಗ್ಗಿದೆ. ಬಳಿಕ ಲೋಕನಾರಥ್‌ ಕಾರಿನಲ್ಲೇ ಜೀವ ಬಿಟ್ಟಿದ್ದಾರೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ನವಲಗುಂದ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಮಳೆಯಿಂದಾಗಿ ರಾಜ್ಯದೆಲ್ಲೆಡೆ ತತ್ತರ – ಕರಾವಳಿ, ಮಲೆನಾಡಿನಲ್ಲಿ ಏನಾಗಿದೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *