ಜನಾಕ್ರೋಶಕ್ಕೆ ಮಣಿದ ಕೇಂದ್ರ – ಅಕ್ಕಿ, ಮೊಸರು ಸೇರಿದಂತೆ 14 ವಸ್ತುಗಳ ಮೇಲೆ ಜಿಎಸ್‍ಟಿ ವಿನಾಯಿತಿ

Public TV
2 Min Read

ನವದೆಹಲಿ: ಜನಾಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ಅಕ್ಕಿ, ಗೋಧಿ ಸೇರಿದಂತೆ 14 ವಸ್ತುಗಳಿಗೆ ಜಿಎಸ್‍ಟಿ ಹೇರುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್‌, ಗೋಧಿ, ಮೊಸರು, ಅಥವಾ ಲಸ್ಸಿ, ಅಕ್ಕಿ, ಓಟ್ಸ್, ಹಿಟ್ಟು, ತೊಗರಿಬೆಳೆ, ಮಂಡಕ್ಕಿ, ರವೆ, ಜೋಳ, ಸಣ್ಣ ಗೋಧಿಗಳ ಮೇಲಿನ ಜಿಎಸ್‍ಟಿ ವಿನಾಯಿತಿಯನ್ನು ನೀಡಲಾಗಿದೆ. ಆದರೆ ಇದಕ್ಕೆ ಕಲವೊಂದು ಷರತ್‍ನ್ನು ವಿಧಿಸಲಾಗದೆ. ಈ ಎಲ್ಲಾ ವಸ್ತುಗಳ ಮೇಲೆ ಲೇಬಲ್ ಇದ್ದರೇ ಅಥವಾ ಪ್ಯಾಕ್ ಮಾಡಿದರೆ ಜಿಎಸ್‍ಟಿ ವಿನಾಯಿತಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಬೇಳೆಕಾಳುಗಳು, ಧಾನ್ಯಗಳು, ಹಿಟ್ಟು ಮುಂತಾದ ನಿರ್ದಿಷ್ಟ ಆಹಾರ ಪದಾರ್ಥಗಳ ಮೇಲೆ ಜಿಎಸ್‌ಟಿ ವಿಧಿಸುವ ಬಗ್ಗೆ ತಪ್ಪು ಕಲ್ಪನೆಗಳಿವೆ. ಇದು ಜಿಎಸ್‌ಟಿ ಕೌನ್ಸಿಲ್‌ನ ಸರ್ವಾನುಮತದ ನಿರ್ಧಾರವಾಗಿದ್ದು, ಜೂನ್ 28ರಂದು ಚಂಡೀಗಢದಲ್ಲಿ ನಡೆದ 47ನೇ ಸಭೆಯಲ್ಲಿ ದರ ತರ್ಕಬದ್ಧಗೊಳಿಸುವಿಕೆಯ ಕುರಿತು ಈ ವಿಷಯವನ್ನು ಮಂಡಿಸುವಾಗ ಎಲ್ಲಾ ರಾಜ್ಯಗಳು ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಗೇಟ್ ತೆರೆದ ಕೆಪಿಸಿ ಅಧಿಕಾರಿಗಳು

nirmala sithraman

ಈ ನಿರ್ಧಾರದಲ್ಲಿ ಸಭೆಯಲ್ಲಿದ್ದ ಬಿಜೆಪಿಯೇತರ ರಾಜ್ಯಗಳಾದ ಪಂಜಾಬ್, ಛತ್ತೀಸ್‌ಗಢ, ರಾಜಸ್ಥಾನ, ತಮಿಳುನಾಡು, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ಎಲ್ಲಾ ರಾಜ್ಯಗಳು ಈ ನಿರ್ಧಾರವನ್ನು ಒಪ್ಪಿಕೊಂಡಿವೆ. ಜಿಎಸ್‌ಟಿ ಕೌನ್ಸಿಲ್‌ನ ಈ ನಿರ್ಧಾರವು ಮತ್ತೊಮ್ಮೆ ಒಮ್ಮತದಿಂದ ಬಂದಿದೆ ಎಂದು ಜಿಎಸ್‌ಟಿ ದರ ಏರಿಕೆಯ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: 10ನೇ ಕ್ಲಾಸ್ ವಿದ್ಯಾರ್ಥಿಯಿಂದಲೇ ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *