ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ: ಬಂಧಿತ ಝಾಕೀರ್ ಪತ್ನಿ ಕಣ್ಣೀರು

Public TV
1 Min Read

ಮಂಗಳೂರು: ನನ್ನ ಪತಿ ಏನು ತಪ್ಪು ಮಾಡಿದ್ದಾರೆಂದು ಪ್ರೂಫ್ ಕೊಡಿ, ನಂತರ ಅವರನ್ನು ಅರೆಸ್ಟ್ ಮಾಡಿ ಎಂದು ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಸಂಬಂಧ ಬಂಧಿತನಾಗಿರುವ ಝಾಕೀರ್ ಪತ್ನಿ ತಸ್ರಿಫಾ ಕಣ್ಣೀರು ಹಾಕಿದ್ದಾರೆ.

ಪಬ್ಲಿಕ್ ಟಿವಿ ಜೊತೆ ಮಾತನಾಡಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ ಅವರು, ನನ್ನ ಪತಿಯನ್ನು ಬಿಟ್ಟು ಬಿಡಿ. ನನ್ನ ಗಂಡ ಯಾವುದೇ ತಪ್ಪು ಮಾಡಿಲ್ಲ. ನನ್ನ ಗಂಡ ಝಾಕೀರ್ ನಿರಪರಾಧಿ ಎಂದು ಗೋಳಾಡಿದ್ದಾರೆ.

ನನ್ನ ಗಂಡನನ್ನು ನನಗೆ ಬಿಟ್ಟುಕೊಡಿ. ನನ್ನ ಗಂಡನನ್ನು ಯಾಕೆ ಜೈಲಿನಲ್ಲಿ ಇಟ್ಟಿದ್ದೀರಿ. ನನ್ನ ಗಂಡ ಏನು ತಪ್ಪು ಮಾಡಿದ್ದಾರೆ ಎಂದು ಪ್ರೂಫ್ ಕೊಡಿ. ಪ್ರೂಫ್ ಕೊಟ್ಟು ನನ್ನ ಗಂಡನನ್ನು ಅರೆಸ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

ನಿನ್ನೆ ಇನ್ನೊಬ್ಬ ಬಂಧಿತ ಶಫೀಕ್ ಪತ್ನಿ ಮಾತನಾಡಿ, ಶಫೀಕ್ ಅಮಾಯಕ. ಆತನನ್ನ ಅರೆಸ್ಟ್ ಮಾಡಲಾಗಿದೆ. ಆತ ಪಿಎಫ್‍ಐ, ಎಸ್‍ಡಿಪಿಐನಲ್ಲಿ ಸಕ್ರಿಯನಾಗಿದ್ದ. ಹಾಗಂತ ಆತ ಆರೋಪಿಯಲ್ಲ. ನಿಜವಾದ ಆರೋಪಿಯನ್ನು ಬಂಧಿಸಿ ಶಫೀಕ್ ನನ್ನ ಬಿಟ್ಟು ಬಿಡಿ ಆತ ಅಪರಾಧಿಯಲ್ಲ ಎಂದು ಮನವಿ ಮಾಡಿಕೊಂಡಿದ್ದರು.

ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳಾದ ಸವಣೂರು ಮೂಲದ ಝಾಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *