ಲಡ್ಡು ಜೊತೆಗೆ 2.19 ಲಕ್ಷ ರೂ. ಬಂದಿದ್ದ ಹಣ ವಾಪಸ್ ನೀಡಿದ ಭಕ್ತ!

Public TV
1 Min Read

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿಬ್ಬಂದಿ ಕಣ್ತಪ್ಪಿನಿಂದ ಪ್ರಸಾದದ ಜೊತೆ ಬಂದಿದ್ದ ಹಣವನ್ನು ಭಕ್ತ ಹಿಂದುರುಗಿಸಿದ್ದಾರೆ.

ಬೆಂಗಳೂರು ಜಿಲ್ಲೆ ಯಶವಂತಪುರ ತಾಲೂಕು ಮೇದರಹಳ್ಳಿಯ ನರಸಿಂಹಮೂರ್ತಿ ಹಣ ಹಿಂದಿರುಗಿಸಿದ ಭಕ್ತ. ಪೊಲೀಸರ ಸಮ್ಮುಖದಲ್ಲಿ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಉಪಕಾರ್ಯದರ್ಶಿ ಬಸವರಾಜುಗೆ ಹಣ ಹಿಂದಿರುಗಿಸಿದ್ದಾರೆ.

ಈ ಸಂಬಂಧ ಮಾತನಾಡಿದ ನರಸಿಂಹಮೂರ್ತಿ, ಮನೆಯಲ್ಲಿ ಪ್ರಸಾದದ ಜೊತೆ ಹಣವಿರುವುದನ್ನು ನೋಡಿ ಗಾಬರಿಗೊಂಡಿದ್ದೆ. ತಕ್ಷಣ ದೇವಸ್ಥಾನದ ಅಧಿಕಾರಿಗಳನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದೆ ಎಂದರು.

ನರಸಿಂಹ ಮೂರ್ತಿ ಅವರು ಜುಲೈ 29ರಂದು ಅಭಿಷೇಕದ ಪ್ರಸಾದದ ಟಿಕೆಟ್ ಪಡೆದಿದ್ದರು. ಪ್ರಸಾದದ ಚೀಲಗಳನ್ನು ನೀಡುವಾಗ ಹಣವಿದ್ದ ಚೀಲವೊಂದನ್ನು ಸಹ ಆಕಸ್ಮಿಕವಾಗಿ ನೌಕರ ನಾಗಭೂಷಣ ಕೊಟ್ಟಿದ್ದರು. ಈ ದೃಶ್ಯ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.

ಈ ಸಂಬಂಧ ಮಲೆ ಮಹದೇಶ್ವರಬೆಟ್ಟದ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ಭಕ್ತ ಹಣ ವಾಪಸ್ ನೀಡುವ ಮೂಲಕ ಪ್ರಕರಣ ಸುಖಾಂತ್ಯಗೊಂಡಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *