ಭೀಕರ ರಸ್ತೆ ಅಪಘಾತದಲ್ಲಿ 6 ಸಾವು, 20 ಮಂದಿಗೆ ಗಾಯ

Public TV
1 Min Read

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭಾರೀ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ ತಿಳಿಸಿದ್ದಾರೆ. ಇದನ್ನೂ ಓದಿ: ರಂಭಾಪುರಿ ಶ್ರೀ ಬಳಿ ನೋವು ತೋಡಿಕೊಂಡಿಲ್ಲ, ಆಗಿದ್ದು ಹೇಳಿದ್ದೇನೆ ಅಷ್ಟೇ: ಸಿದ್ದರಾಮಯ್ಯ ಸ್ಪಷ್ಟನೆ

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಸಂಚು ಆರೋಪ ಬೆನ್ನಲ್ಲೇ ಖಾಕಿ ಅಲರ್ಟ್- ಸಿದ್ದರಾಮಯ್ಯಗೆ SPಯಿಂದ ಫುಲ್ ಎಸ್ಕಾರ್ಟ್

ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಈ ಸಮಯದಲ್ಲಿ, ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *