ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ

Public TV
1 Min Read

ಬೆಂಗಳೂರು: 75 ವರ್ಷಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ್ದ ಸರ್ಕಾರ ಈಗ ಕನ್ನಡ ರಾಜ್ಯೋತ್ಸವ ಆಚರಣೆಗೂ ಮುಂದಾಗಿದೆ.

ನವೆಂಬರ್ 1ಕ್ಕೆ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ತಿಳಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 75 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿ ಇತಿಹಾಸ ನಿರ್ಮಾಣ ಮಾಡಲಾಗಿದೆ. ಅದರಂತೆ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವವನ್ನು ಚಾಮರಾಜಪೇಟೆ ಮೈದಾನದಲ್ಲಿ ಆಚರಣೆ ಮಾಡ್ತೀವಿ ಎಂದು ತಿಳಿಸಿದರು. ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ಶಾಂತಿಯಿಂದ ಸುವ್ಯವಸ್ಥೆಯಿಂದ ಆಚರಣೆ ಮಾಡಿದ್ದೇವೆ. ಹಾಗೇ ಗಣೇಶೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕೂಡಾ ಆಚರಣೆ ಮಾಡ್ತೀವಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜ್ಯೂಸ್ ಜಾಕಿಂಗ್ ಮೂಲಕ ಡೇಟಾ ಕಳವು – ಪವರ್ ಬ್ಯಾಂಕ್ ಚಾರ್ಚಿಂಗ್‍ನಿಂದ ಆಪತ್ತು!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *